ಬೆಂಗಳೂರಿನ ಉತ್ತರ ಹಳ್ಳಿಯಲ್ಲಿ ವಿದ್ಯಾರ್ಥಿ ನಿಲಯ ಉದ್ಘಾಟಿಸಿ ಮಾತನಾಡಿದ ಸಿಎಂ, ಭಗವಂತ ಎಲ್ಲಿಯವರೆಗೂ ಮುಖ್ಯಮಂತ್ರಿ ಆಗಿ ಇರುವಂತೆ ಆಶೀರ್ವಾದ ಮಾಡುತ್ತಾನೋ ಅಲ್ಲಿಯವರೆಗೆ ಇರುತ್ತೇನೆ. ಕೆಲವರು ಸರ್ಕಾರವನ್ನು ಅಸ್ಥಿರ ಮಾಡುವ ಪ್ರಯತ್ನ ಮಾಡುತ್ತಿದ್ದು, ಇಂತಹ ರಾಜಕೀಯ ಬೆಳವಣಿಗೆಯ ಬಗ್ಗೆ ನಾನು ಎಂದಿಗೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.