ಮತ್ತೆ ರಾಜ್ಯದ ಸಿಎಂ ಆಗುವೆ: ಹೇಳಿಕೆ ಸಮರ್ಥಿಸಿಕೊಂಡ ಸಿದ್ದರಾಮಯ್ಯ

ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಸಾಕಷ್ಟು ಚರ್ಚೆಗಳಿಗೆ ಕಾರಣವಾದ ಹಿನ್ನಲೆಯಲ್ಲಿ ತಮ್ಮ ಹೇಳಿಕೆಯನ್ನು ಸಿದ್ದರಾಮಯ್ಯ ಅವರು ಶನಿವಾರ ಸಮರ್ಥಿಸಿಕೊಂಡಿದ್ದಾರೆ...
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on
ಮೈಸೂರು: ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಸಾಕಷ್ಟು ಚರ್ಚೆಗಳಿಗೆ ಕಾರಣವಾದ ಹಿನ್ನಲೆಯಲ್ಲಿ ತಮ್ಮ ಹೇಳಿಕೆಯನ್ನು ಸಿದ್ದರಾಮಯ್ಯ ಅವರು ಶನಿವಾರ ಸಮರ್ಥಿಸಿಕೊಂಡಿದ್ದಾರೆ. 
ಹೇಳಿಕೆ ಕುರಿತಂತೆ ಹಾಸನದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದೆ. ಇದರಲ್ಲಿ ತಪ್ಪೇನಿದೆ? ನಮ್ಮ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಲಾದೀತೆ? ಎಂದು ಪ್ರಶ್ನಿಸಿದ್ದಾರೆ. 
ಜನರ ಆಶೀರ್ವಾದವಿದ್ದರೆ ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿದ್ದಾನೆ. ನಾನು ಮಾಡಿದ ಕೆಲಸ ನೋಡಿ ಜನರ ಆಶೀರ್ವಾದ ಮಾಡಬೇಕಿತ್ತು. ಆದರೆ, ವಿರೋಧಿಗಳೆಲ್ಲ ಒಂದಾಗಿದ್ದರಿಂದ ಸಾಧ್ಯವಾಗಿಲ್ಲ. ಜನರ ಆಶೀರ್ವಾದ ಇದ್ದರೆ, ಏಕೆ ಸಾಧ್ಯವಾಗುವುದಿಲ್ಲ ಎಂದಷ್ಟೇ ಹೇಳಿದ್ದೆನೇ ಹೊರತು ಅದಕ್ಕೆ ಯಾರು ಏನೋ ಅರ್ಥ ಕಲ್ಪಿಸಿಕೊಂಡರೆ ಎನು ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 
ಜನರ ಕೇಳಿದಾಗ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎನ್ನಲು ಆಗುತ್ತದೆಯೇ? ಮುಂದಿನ ಚುನಾವಣೆ ಐದು ವರ್ಷಗಳ ನಂತರವೇ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com