ಬೆಂಗಳೂರು: ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕು ಅಂದುಕೊಂಡಿದ್ದೇನೆ ಎಂಬ ಮಾಜಿ ಸಿಎಂ ಸಿದ್ದರಮಾಯ್ಯ ಅವರ ಹೇಳಿಕೆ ಮೈತ್ರಿ ಸರ್ಕಾರದಲ್ಲಿ ಹಲವು ಭಿನ್ನಾಭಿಪ್ರಾಯಗಳಿಗೆ ಕಾರಣವಾಗಿದೆ. ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಮೈತ್ರಿ ಸರ್ಕಾರದ ಅಸ್ಥಿತ್ವಕ್ಕೆ ತಳುಕುಹಾಕಿ ಹಲವು ವಿಶ್ಲೇಷಣೆಗಳು ಪ್ರಕಟವಾಗುತ್ತಿದ್ದಂತೆಯೇ ಸರ್ಕಾರ ಉಳಿಸುವ ಜವಾಅನ್ದಾರಿಯನ್ನು ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ಅಧ್ಯಕ್ಷರ ಹೆಗಲಿಗೆ ವಹಿಸಿದ್ದಾರೆ.
ಲೋಕಸಭಾ ಚುನಾವಣೆ ವರೆಗೂ ಸರ್ಕಾರದ ಅಸ್ಥಿತ್ವ ಉಭಯ ಪಕ್ಷಗಳಿಗೂ ಅನಿವಾರ್ಯವಾಗಿದೆ. ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ರಾಜ್ಯ ನಾಯಕರಿಗೆ ಸೂಚನೆ ನೀಡಲು ಹೈಕಮಾಂಡ್ ಧಾವಿಸಿದ್ದು, ಸರ್ಕಾರದ ಮೈತ್ರಿ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಎಲ್ಲಾ ನಾಯಕರಿಗೆ ಸೂಚನೆ ನೀಡಿದೆ,
ರಾಹುಲ್ ಗಾಂಧಿ ಸಹ ಪಕ್ಷದ ಶಾಸಕರನ್ನು ಒಗ್ಗಟ್ಟಿನಿಂದ ಇರುವಂತೆ ಸೂಚನೆ ನೀಡಿದ್ದು, ಈ ಹೊಣೆಗಾರಿಕೆಯನ್ನು ಗೃಹ ಸಚಿವ ಪರಮೇಶ್ವರ್ ಹಾಗೂ ಡಿಕೆ ಶಿವಕುಮಾರ್ ಗೆ ವಹಿಸಲಾಗಿದೆ. ತಮ್ಮ ಹೇಳಿಕೆ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು 5 ವರ್ಷದ ನಂತರ ಬರುವ ಚುನಾವಣೆ ಬಗ್ಗೆ ಮಾತನಾಡಿದ್ದೆ ಎಂದು ಹೇಳಿದ್ದಾರೆ.