ಸಮನ್ನವ ಸಮಿತಿಗೆ ನನ್ನನ್ನು ಸೇರ್ಪಡೆಗೊಳಿಸುವುದಕ್ಕೆ ಸಿದ್ದರಾಮಯ್ಯ ಅವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಾನು ಜೆಡಿಎಸ್ ರಾಜ್ಯಾಧ್ಯಕ್ಷ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರೊಂದಿಗೆ ನಾನು ಕೂಡ ಸಮನ್ವಯ ಸಮಿತಿಯಲ್ಲಿರಬೇಕು. ಕಾಂಗ್ರೆಸ್ ಹೈಕಮಾಂಡ್ ಇದಕ್ಕೆ ಒಪ್ಪಿಗೆ ನೀಡಿದ್ದರೂ, ಸಿದ್ದರಾಮಯ್ಯ ಅವರು ಒಪ್ಪುದ್ದಿಲ್ಲ. ಸರ್ಕಾರವನ್ನು ಅಸ್ಥಿರಗೊಳಿಸಲು ಪಿತೂರಿಗಳು ನಡೆಯುತ್ತಿದ್ದು, ಇದರ ಹಿಂದೆ ಯಾರಿದ್ದಾರೆಂಬುದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ.