ಲೋಕಸಭಾ ಚುನಾವಣೆಯಲ್ಲಿ ರಮ್ಯಾ ಸ್ಪರ್ಧೆ: ತಾಯಿ ರಂಜಿತಾ ಹೇಳಿಕೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಸಾಮಾಜಿಕ ಜಾಲತಾಣಗಳ ವಿಭಾಗದ ಮುಖ್ಯಸ್ಥೆ ರಮ್ಯಾ ಅವರು ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲಿದ್ದಾರೆ ಎಂದು ರಮ್ಯಾ ತಾಯಿ ರಂಜಿತಾ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಸಾಮಾಜಿಕ ಜಾಲತಾಣಗಳ ವಿಭಾಗದ ಮುಖ್ಯಸ್ಥೆ ರಮ್ಯಾ ಅವರು ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲಿದ್ದಾರೆ ಎಂದು ರಮ್ಯಾ ತಾಯಿ ರಂಜಿತಾ ಹೇಳಿದ್ದಾರೆ.
ನಗರಸಭೆ ಚುನಾವಣೆ ನಿಮಿತ್ತ ಮಂಗಳವಾರ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಮ್ಯಾ ಸ್ಪರ್ಧೆ ಖಚಿತ ಎಂದು ಹೇಳಿದರು. 'ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್ ನ ರಾಷ್ಟ್ರೀಯ ಮುಖಂಡರು ರಮ್ಯಾಗೆ ಸೂಚನೆ ನೀಡಿದ್ದಾರೆ. ಅದಕ್ಕೆ ರಮ್ಯಾ ಕೂಡ ಒಪ್ಪಿಗೆ ಸೂಚಿಸಿದ್ದಾರೆ. ಶೀಘ್ರ ಅವರು ಮಂಡ್ಯಕ್ಕೆ ಭೇಟಿ ನೀಡಿ ಸ್ಥಳೀಯ ಮುಖಂಡರ ಸಭೆ ನಡೆಸಲಿದ್ದಾರೆ ಎಂದು ಹೇಳಿದರು.
ಅಂತೆಯೇ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಜೆಡಿಎಸ್‌ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ ಅವರು, ಎಲ್ಲಾ ಮುಖಂಡರು ಒಗ್ಗಟ್ಟಿನಿಂದ ರಮ್ಯಾ ಗೆಲುವಿಗೆ ಶ್ರಮಿಸುತ್ತಾರೆ ಎಂಬ ವಿಶ್ವಾಸ ತಮಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com