ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆ ನಂತರ ದೋಸ್ತಿಗಳ ನಡುವೆ ಮುಸುಕಿನ ಗುದ್ದಾಟ ನಡಿತಾನೆ ಇದೆ.
ಇನ್ನು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಯಮ್ಯ ನಡುವಿನ ಮುಸುಕಿನ ಗುದ್ದಾಟ ವಿಕೋಪಕ್ಕೆ ತಿರುಗಿದೆ. ಇದು ದೋಸ್ತಿ ಸರ್ಕಾರ ತೂಗುಗತ್ತಿ ಮೇಲೆ ನಿಲ್ಲುವಂತೆ ಮಾಡಿದೆ.
ಹೌದು, ಮೈಸೂರಿನ ರಾಜೇಂದ್ರ ಶ್ರೀಗಳ ಜಯಂತಿ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಗೈರು ಹಾಜರಾಗಿದ್ದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಜೊತೆ ವೇದಿಕೆ ಹಂಚಿಕೊಳ್ಳಲು ಸಿದ್ದು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ.
ಇನ್ನು ಇತ್ತೀಚೆಗಷ್ಟೇ ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗುವ ಅಭಿಲಾಷೆ ವ್ಯಕ್ತಪಡಿಸಿದ್ದರು. ಇದಕ್ಕೆ ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಅವರು ಟೀಕಿಸಿದ್ದಾರೆ.