ದಿನಗಳು ನೂರು, ಹೋದಲೆಲ್ಲಾ ಕಣ್ಣೀರು, ಅಭಿವೃದ್ಧಿಗೆ ಎಳ್ಳುನೀರು: ಬಿಜೆಪಿ ಟ್ಟೀಟ್

ಇನ್ನಾದರೂ ನಿಮ್ಮ ಸರ್ಕಾರ ಟೇಕ್ ಆಫ್ ಆಗಲಿ,ಸ್ಥಗಿತಗೊಂಡಿರುವ ರಾಜ್ಯದ ಅಭಿವೃದ್ಧಿಗೆ ಚಾಲನೆ ಸಿಗಲಿ ಎಂದು ಹಾರೈಸುತ್ತೇವೆ ಎಂದು ಟ್ವೀಟ್ ಮಾಡಿದೆ....
ಎಚ್.ಡಿ ಕುಮಾರ ಸ್ವಾಮಿ ಮತ್ತು ಪರಮೇಶ್ವರ
ಎಚ್.ಡಿ ಕುಮಾರ ಸ್ವಾಮಿ ಮತ್ತು ಪರಮೇಶ್ವರ
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನ ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಟ್ವಿಟ್ಟರ್ ನಲ್ಲಿ ಟಾಂಗ್ ಕೊಟ್ಟಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ಅಪವಿತ್ರ ಮೈತ್ರಿಯಲ್ಲಿಮನ ತೀವ್ರ ಭಿನ್ನಮತದ ನಡುವೆಯೂ 100 ದಿನಗಳನ್ನು ಪೂರೈಸಿರುವುದಕ್ಕೆ  ಅಭಿನಂದನೆ ಸಲ್ಲಿಸಿದೆ.
ಇನ್ನಾದರೂ ನಿಮ್ಮ ಸರ್ಕಾರ ಟೇಕ್ ಆಫ್ ಆಗಲಿ,ಸ್ಥಗಿತಗೊಂಡಿರುವ  ರಾಜ್ಯದ ಅಭಿವೃದ್ಧಿಗೆ ಚಾಲನೆ ಸಿಗಲಿ ಎಂದು ಹಾರೈಸುತ್ತೇವೆ ಎಂದು ಟ್ವೀಟ್ ಮಾಡಿದೆ.
ದಿನಗಳು ನೂರು, ಹೋದಲ್ಲೆಲ್ಲಾ ಕಣ್ಣೀರು, ಅಭಿವೃದ್ಧಿಗೆ ಎಳ್ಳುನೀರು ಎಂದು ಕವಿತೆ ಶೈಲಿಯಲ್ಲಿ ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com