ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಪ್ರಕೃತಿ ಚಿಕಿತ್ಸೆಗಾಗಿ ಕೇರಳ ರಾಜ್ಯಕ್ಕೆ ತೆರಳಿದ ಬಿ.ಎಸ್.ಯಡಿಯೂರಪ್ಪ

ಚಳಿಗಾಲ ಅಧಿವೇಶನ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಈ ನಡುವಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಪ್ರಕೃತಿ ಚಿಕಿತ್ಸೆಗಾಗಿ ಕೇರಳ ಆಯುರ್ವೇದ ಆಸ್ಪತ್ರೆಗೆ ತೆರಳಿದ್ದಾರೆ...
Published on
ಬೆಂಗಳೂರು: ಚಳಿಗಾಲ ಅಧಿವೇಶನ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಈ ನಡುವಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಪ್ರಕೃತಿ ಚಿಕಿತ್ಸೆಗಾಗಿ ಕೇರಳ ಆಯುರ್ವೇದ ಆಸ್ಪತ್ರೆಗೆ ತೆರಳಿದ್ದಾರೆ. 
ಮಲಪ್ಪುರಂನ ಕೊಟ್ಟಕ್ಕಲ್ ಆರ್ಯ ವೈದ್ಯಶಾಲೆ ಯಡಿಯೂರಪ್ಪ ಅವರು ಶುಕ್ರವಾರದಿಂದ ಚಿಕಿತ್ಸೆ ಪಡೆಯುತ್ತಿದ್ದು, ವಾರಗಳ ಕಾಲ ಚಿಕಿತ್ಸೆ ಪಡೆದುಕೊಳ್ಳಲಿದ್ದಾರೆಂದು ತಿಳಿದುಬಂದಿದೆ. 
ಅಧಿವೇಶನ ಆರಂಭವಾಗುವುದಕ್ಕೂ ಮುನ್ನವೇ ನಗರಕ್ಕೆ ಯಡಿಯೂರಪ್ಪ ಅವರು ವಾಪಸ್ಸಾಗಲಿದ್ದು, ಬಳಿಕ ಪಕ್ಷದ ಒಳಗೆ ಹಾಗೂ ಹೊರಗೆ ಮೈತ್ರಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಿದ್ಧತೆ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ. 
ಈ ಹಿಂದೆ ಹೇಳಿಕೆ ನೀಡಿದ್ದ ಯಡಿಯೂರಪ್ಪ ಅವರು, ಸರ್ಕಾರ ವೈಫಲ್ಯಗಳನ್ನು ಬಹಿರಂಗಪಡಿಸಲು ಡಿ.10 ರಂದು ಬೆಳಗಾವಿಯಲ್ಲಿ ಬೃಹತ್ ರೈತ ರ್ಯಾಲಿ ನಡೆಸುವುದಾಗಿ ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com