ಈ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದಗಂಗಾ ಮಠದ ಕಿರಿಯ ಸ್ವಾಮಿಗಳು, ವೈದ್ಯರಿಗೆ, ಶಿಕ್ಷಕರಿಗೆ ಜಾತಿಯೇ ಇಲ್ಲ. ವೈದ್ಯೋ ನಾರಾಯಣೋ ಹರಿ ಎನ್ನುವರು. ಆಸ್ಪತ್ರೆ, ಶಾಲೆಗಳಿಗೆ ಅಲ್ಪಸಂಖ್ಯಾತ ಎನ್ನುವ ವಿಚಾರ ತರಬಾರದು. ಆಸ್ಪತ್ರೆಯಲ್ಲಿ ಎಲ್ಲ ಧರ್ಮದವರೂ ಇರುತ್ತಾರೆ. ಎಲ್ಲರಿಗೂ ಅನಾರೋಗ್ಯ ಉಂಟಾಗುತ್ತದೆ. ಎಲ್ಲ ವೈದ್ಯರೂ ಓದಿರುತ್ತಾರೆ. ಅದನ್ನು ಅರಿತಿದ್ದರೂ ಸಚಿವರು ಈ ರೀತಿ ಹೇಳಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.