ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರನ್ನೂ ಗೂಂಡಾಗಳೆಂದು ಕರೆಯುವ ಮೂಲಕ ಕುಮಾರಸ್ವಾಮಿಯವರು ರೈತರಿಗೆ ಅವಮಾನ ಮಾಡಿದ್ದಾರೆ. ತಮ್ಮ ಹುಟ್ಟೂರಿನ ಸುತ್ತಮುತ್ತಲಿನ ನಾಲ್ಕು ಜಿಲ್ಲೆಗಳಿಗೆ ಮಾತ್ರವೇ ಸೀಮಿತರಾಗಿರುವ ಮುಖ್ಯಮಂತ್ರಿಗಳು, ರಾಜ್ಯದ ಇತರೆ ಭಾಗಗಳನ್ನು ನಿರ್ಲಕ್ಷಿಸುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳ ವಿರುದ್ಧ ಅಧಿಕಾರ ಬಿಟ್ಟು ತೊಲಗಿ ಎಂಬ ಉದ್ದೇಶದಿಂದ ಬಿಜೆಪಿ ಬೃಹತ್ ರೈತರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಪ್ರತಿಭಟನೆಯಲ್ಲಿ ಕನಿಷ್ಠ 1 ಲಕ್ಷ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.