ಸಿಎಂ ಇರೋದು ಹೆಬ್ಬೆಟ್ಟು ಒತ್ತುವುದಕ್ಕಲ್ಲ: ಬಸವರಾಜ್ ಹೊರಟ್ಟಿ

ವಿಧಾನ ಪರಿಷತ್​ ಸಭಾಪತಿ ಹುದ್ದೆ ಕಾಂಗ್ರೆಸ್ ಪಾಲಾಗಿದ್ದು, ಸಭಾಪತಿ ಸ್ಥಾನದ ಆಕಾಂಕ್ಷಿಯಾಗಿದ್ದ....
ಬಸವರಾಜ್ ಹೊರಟ್ಟಿ
ಬಸವರಾಜ್ ಹೊರಟ್ಟಿ
ಬೆಳಗಾವಿ: ವಿಧಾನ ಪರಿಷತ್​ ಸಭಾಪತಿ ಹುದ್ದೆ ಕಾಂಗ್ರೆಸ್ ಪಾಲಾಗಿದ್ದು, ಸಭಾಪತಿ ಸ್ಥಾನದ ಆಕಾಂಕ್ಷಿಯಾಗಿದ್ದ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಮೈತ್ರಿ ಸರ್ಕಾರ ರಚನೆಯಾದ ನಂತರ ಪರಿಷತ್​ ಹಂಗಾಮಿ ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ಅವರು ತಾವೇ ಸಭಾಪತಿಯಾಗುತ್ತೇವೆ ಎಂಬ ನಂಬಿಕೆಯಲ್ಲಿದ್ದರು. ಆದರೆ, ಆ ಸ್ಥಾನ ಸಿಗದಿದ್ದರಿಂದ ತೀವ್ರ ನಿರಾಸೆಗೊಂಡ ಹೊರಟ್ಟಿ ಅವರು ಹೆಬ್ಬೆಟ್ಟು ಒತ್ತುವುದಕ್ಕೆ ಮುಖ್ಯಮಂತ್ರಿಯಾಗಿರಬಾರದು ಎಂದು ಸಿಎಂ ಎಚ್ ಡಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಸುವರ್ಣ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ ಅವರು 'ಎಚ್‌ಡಿಕೆ ಅವರು ಮುಖ್ಯಮಂತ್ರಿಯಾಗಿರುವುದು ಮೈತ್ರಿ ಧರ್ಮ ಪಾಲಿಸುವುದಕ್ಕೆ. ಮೈತ್ರಿ ಪಕ್ಷ ಕಾಂಗ್ರೆಸ್ ನಲ್ಲಿ ಒಗ್ಗಟ್ಟಿಲ್ಲ. ಏಕ ಪಕ್ಷೀಯವಾಗಿ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಕಾಂಗ್ರೆಸ್‌ ವರ್ತನೆ ಪ್ರಶ್ನಿಸುವಂತೆ ವರಿಷ್ಠರಿಗೆ ಕೇಳಿಕೊಳ್ಳುತ್ತೇನೆ' ಎಂದಿದ್ದಾರೆ. 
ಪ್ರಮುಖ ಹುದ್ದೆಗಳ ವಿಚಾರದಲ್ಲಿ ಕಾಂಗ್ರೆಸ್‌ ಹೇಳಿದಂತೆ ನಡೆದರೆ, ಇದೇ ತರ ಮುಂದುವರಿದರೆ ಹೆಬ್ಬೆಟ್ಟು ಒತ್ತುವುದಕ್ಕೆ ಮುಖ್ಯಮಂತ್ರಿ ಆಗುತ್ತಾರೆ ಎಂದು ಎಚ್‌ಡಿಕೆ ವಿರುದ್ಧ ಅಸಮಧಾನ ಹೊರ ಹಾಕಿದ್ದಾರೆ. 
ಸಚಿವ ಸ್ಥಾನ ಸಿಗದ ಹತಾಶೆಯಲ್ಲಿದ್ದ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ಕೊಡಿಸುವುದಾಗಿ ಜೆಡಿಎಸ್ ವರಿಷ್ಠರು ಸಮಾಧಾನ ಮಾಡಿದ್ದರು. ಆದರೆ ಬುಧವಾರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಕೊನೆ ಕ್ಷಣದಲ್ಲಿ ಕಾಂಗ್ರೆಸ್ ನ ಪ್ರತಾಪ್ ಚಂದ್ರಶೆಟ್ಟಿ ಅವರನ್ನು ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com