ಮುಂದಿನ 4-5 ತಿಂಗಳುಗಳಲ್ಲಿ ಪ್ರಸ್ತುತ ಉತ್ತಮ ಮಳೆಯಾಗಿರುವ ಸ್ಥಳದಲ್ಲಿಯೂ ಕೂಡ ಬರ ಪರಿಸ್ಥಿತಿ ಎದುರಾಗಲಿದೆ. ಆದರೂ ಸರ್ಕಾರ ಯಾವುದೇ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಚುನಾವಣೆ ವೇಲೆ ಜೆಡಿಎಸ್ ನೀಡಿದ್ದ ಭರವಸೆಗಳೆಲ್ಲವೂ ಅಪ್ಪಟ ಸುಳ್ಳು, ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದರು. ರಾಜ್ಯದಲ್ಲಿ ಇಸ್ರೇಲ್ ಮಾದರಿ ಕೃಷಿ ತಂತ್ರಜ್ಞಾನವನ್ನು ಜಾರಿಗ ತರಲಾಗುತ್ತದೆ ಎಂದೂ ಕೂಡ ಹೇಳಿದ್ದರು. ಕೃಷಿ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ನಿಗದಿ ಪಡಿಸುವಲ್ಲಿ ಮುಖ್ಯಮಂತ್ರಿಗಳು ಈಗಲೂ ಕ್ರಮ ಕೈಗೊಂಡಿಲ್ಲವೇಕೆ? ನಾನು ಅಧಿಕಾರಕ್ಕೆ ಬರಬಾರದು ಎಂಬ ಒಂದೇ ಕಾರಣಕ್ಕೆ ಕೇವಲ 37 ಸ್ಥಾನ ಪಡೆದವರಿಗೆ ಬೆಂಬಲ ನೀಡಿ ಮುಖ್ಯಮಂತ್ರಿ ಮಾಡಿದ್ದವರ ಬಗ್ಗೆ ಕಾಂಗ್ರೆಸ್ ನಾಯಕರು ಶೀಘ್ರದಲ್ಲಿಯೇ ಪಶ್ಚಾತ್ತಾಪ ಪಡುವ ಕಾಲ ಬರಲಿದೆ ಎಂದು ತಿಳಿಸಿದ್ದಾರೆ.