ಪ್ರತಾಪ ಚಂದ್ರ ಶೆಟ್ಟಿ ಕರಾವಳಿ ಭಾಗದವರಾಗಿದ್ದು, ಉತ್ತರ ಕರ್ನಾಟಕವನ್ನು ಮತ್ತೆ ನಿರ್ಲಕ್ಷ್ಯಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ, ಉತ್ತರ ಕರ್ನಾಟಕದಲ್ಲಿ 41 ಶಾಸಕ ಪೈಕಿ 5 ಸಚಿವ ಸ್ಥಾನ ಲಭ್ಯವಾಗಿದೆ. ಆದರೆ, ದಕ್ಷಿಣ ಕರ್ನಾಟಕದಲ್ಲಿ 36 ಶಾಸಕರ ಪೈಕಿ 9 ಸಚಿವ ಸ್ಥಾನ ಸಿಕ್ಕಿದೆ. ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿರುವುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ ಎಂದು ಮಾಜಿ ಸಚಿವ ಎಂಬಿ ಪಾಟೀಲ್ ಬೇಸರ ವ್ಯಕ್ತ ಪಡಿಸಿದ್ದಾರೆ.