ಪಂಚರಾಜ್ಯಗಳ ಪೈಕಿ ಕಾಂಗ್ರೆಸ್ ಮೂರು ರಾಜ್ಯಗಳಲ್ಲಿ ಭರ್ಜರಿ ಗೆಲವು ಸಾಧಿಸಿದ್ದ ಹಿನ್ನಲೆಯಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ನಿನ್ನೆ ಪ್ರಮಾಣವಚನ ಸ್ವೀಕಾರ ಸಮಾರಂಭ ಆಯೋಜಿಸಿದ್ದರು. ಈ ಹಿನ್ನಲೆಯಲ್ಲಿ ಕುಮಾರಸ್ವಾಮಿಯವರು ಈ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಲುವಾಗಿ ಸದನಕ್ಕೆ ಗೈರು ಹಾಜರಾಗಿದ್ದರು. ಮೂಲಗಳ ಪ್ರಕಾರ ಇನ್ನೂ ನಾಲ್ಕು ದಿನಗಳ ಕಾಲ ಹಲವು ನಾಯಕರು ಗೈರು ಹಾಜರಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಡಿ.22 ರಂದು ಸಂಪುಟ ವಿಸ್ತರಣೆ ಇರುವ ಹಿನ್ನಲೆಯಲ್ಲಿ ರಾಜಧಾನಿ ದೆಹಲಿಗೆ ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್, ದಿನೇಶ್ ಗುಂಡೂರಾವ್ ಹಾಗೂ ಈಶ್ವರ್ ಖಂಡ್ರೆಯವರು ತೆರಳಲಿದ್ದಾರೆ.