ಗುರುವಾರ ಸದನದ ಕಲಾಪ ಮುಂದೂಡಿದ ಬಳಿಕ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷದ ಸದಸ್ಯರ ಬಗ್ಗೆ ಮುಖ್ಯಮಂತ್ರಿಗಳ ಮಾತುಗಳು ದುರಹಂಕಾರದಿಂದ ಕೂಡಿದೆ. ಅಧಿವೇಶನ ನಡೆಸಲು ಪ್ರತಿಪಕ್ಷ ಸಹಕಾರ ನೀಡಲು ಸಿದ್ಧವಿದ್ದರೂ, ಆಡಳಿತ ಪಕ್ಷಕ್ಕೆ ಮನಸ್ಸಿಲ್ಲ. ಸದನದಲ್ಲಿ ಮುಖ್ಯಮಂತ್ರಿಗಳ ಮಾತುಗಳು ದುರಹಂಕಾರದಿಂದ ಕೂಡಿದೆ. ಅಧಿವೇಶನ ನಡೆಸಲು ಪ್ರತಿಪಕ್ಷ ಸಹಕಾರ ನೀಡಲು ಸಿದ್ಧವಿದ್ದರೂ, ಆಡಳಿತ ಪಕ್ಷಕ್ಕೆ ಮನಸ್ಸಿಲ್ಲ. ಸದನದಲ್ಲಿ ಮುಖ್ಯಮಂತ್ರಿಗಳ ನಡೆಯನ್ನು ಗಮನಿಸಿದರೆ, ಅವರಿಗೆ ಅಧಿಕಾರದ ಮದ ನೆತ್ತಿಗೇರಿರುವುದು ಸ್ಪಷ್ಟವಾಗಿದೆ ಎಂದು ಕಿಡಿಕಾರಿದರು.