ನಾನು ಮೊದಲನೇ ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದೇನೆ. ನನ್ನ ಕ್ಷೇತ್ರದ ಹಲವಾರು ಕೆಲಸಗಳನ್ನು ಮಾಡಲು ನನಗೆ ಇನ್ನೂ ಬಹಳ ಸಮಯಬೇಕಿದೆ. ಹೀಗಾಗಿ ನನಗೆ ನೀಡಿರುವ ಸಂಸದೀಯ ಕಾರ್ಯದರ್ಶಿ ಹುದ್ದೆ ಸದ್ಯಕ್ಕೆ ಬೇಡ. ಅದು ಯಾರಿಗೆ ಅವಶ್ಯಕತೆ ಇದೆ ಅವರಿಗೆ ಪಕ್ಷ ಕೊಡಲಿ. ನಾನು ನನ್ನ ಕ್ಷೇತ್ರದ ಜನರಿಗಾಗಿ ಕೆಲಸ ಮಾಡಿ ಅವರ ಋಣವನ್ನು ತೀರಿಸಬೇಕಿದೆ. ನನ್ನ ತಂದೆ ಎರಡು ಬಾರಿ ಡಿಸಿಸಿ ಅಧ್ಯಕ್ಷರಾಗಿ, 7 ಬಾರಿ ಶಾಸಕರಾಗಿ, ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ. ಕೇವಲ ಒಂದು ಶಾಸಕರಿಂದ ಈಗ 15ಕ್ಕೂ ಹೆಚ್ಚು ಶಾಸಕರು ಆಯ್ಕೆಯಾಗಲು ಶ್ರಮಿಸಿದ್ದಾರೆ. ಅವರನ್ನು ಮಂತ್ರಿಯಾಗಿ ನೋಡಲು ಇಷ್ಟಪಡುತ್ತೇನೆಂದು ತಿಳಿಸಿದ್ದಾರೆ.