ಅತೃಪ್ತ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಹೇಳಿಕೆ

ಸಚಿವ ಸ್ಥಾನ ಕಳೆದುಕೊಂಡಿರುವ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿರುವ ಆಡಿಯೋ ಕ್ಲಿಪ್ ವೈರಲ್ ಆಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಸಚಿವ ಸ್ಥಾನ ಕಳೆದುಕೊಂಡಿರುವ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷದ  ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿರುವ  ಆಡಿಯೋ ಕ್ಲಿಪ್ ವೈರಲ್ ಆಗಿದೆ. ತಮ್ಮದೊಂದಿಗೆ ಯಾವ ಯಾವ ಶಾಸಕರು ಸೇರ್ಪಡೆಯಾಗಲಿದ್ದಾರೆ ಎಂಬುದು ಇನ್ನೂ  ಸ್ಪಷ್ಟವಾಗಿಲ್ಲ ಎಂದು ಅವರು ಅದರಲ್ಲಿ ಹೇಳಿದ್ದಾರೆ.

ಒಂದು ವಾರ ಅಥವಾ ಎರಡು ವಾರಗಳಲ್ಲಿ ರಾಜೀನಾಮೆ ನೀಡುವುದಾಗಿ ಅವರು ಹೇಳಿದ್ದಾರೆ. ಕೆಲ ಮಾಧ್ಯಮಗಳಿಗೂ ಈ ವಿಷಯ ತಿಳಿಸಿದ್ದಾರೆ. ಆದಾಗ್ಯೂ, ಜಾರಕಿಹೊಳಿಗೆ ತೆರಳಿ ರಮೇಶ್ ಜೊತೆಗೆ ಮಾತುಕತೆ ನಡೆಸುವುದಾಗಿ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿ, ಬಳ್ಳಾರಿ, ರಾಯಚೂರು ಜಿಲ್ಲೆಗಳ ಅತೃಪ್ತ ಶಾಸಕರೊಂದಿಗೆ ಬೆಂಗಳೂರಿನಲ್ಲಿಂದು  ರಮೇಶ್ ಜಾರಕಿಹೊಳಿ ಮಾತುಕತೆ ನಡೆಸಲಿದ್ದು, ನಿರ್ಧಾರ ಕೈಗೊಳ್ಳಲು ಒತ್ತಡ ಹಾಕಲಿದ್ದಾರೆ.
ಅಥಣಿಯ ಮಹೇಶ್ ಕುಮತಳ್ಳಿ,  ಕಾಗವಾಡದ ಎಸ್. ಪಾಟೀಲ್.  ಹಾಗೂ ಬಳ್ಳಾರಿ, ರಾಯಚೂರು, ಕೊಪ್ಪಳ ಭಾಗದಲ್ಲಿನ ಐದರಿಂದ ಆರು ಶಾಸಕರೊಂದಿಗೆ ರಮೇಶ್  ಜಾರಕಿಹೊಳಿ  ಚರ್ಚೆ ನಡೆಸಲಿದ್ದಾರೆ  ಎಂಬುದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com