ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ನಂತರ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಭುಗಿಲೆದ ಬೆನ್ನಲ್ಲೇ 9 ಮಂದಿ ಪಕ್ಷದ ಕಾರ್ಯಕರ್ತರನ್ನು ರಾಜ್ಯ ಕಾಂಗ್ರೆಸ್ ಸಮಿತಿ ಅಮಾನತು ಮಾಡಿದೆ.
ಪಕ್ಷ ವಿರೋಧಿ ಚಟುವಟಿಕೆ ಆರೋಪ ಶಿಸ್ತು ಸಮಿತಿಯಿಂದ ಸಾಬೀತಾದ ಹಿನ್ನೆಲೆಯಲ್ಲಿ 9 ತಾಲೂಕ್ ಮತ್ತು ಪಂಚಾಯತ್ ಮಟ್ಟದ ಸದಸ್ಯರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕ್ರಮ ಕೈಗೊಂಡಿದ್ದಾರೆ. ಈ ಮೂಲಕ ಪಕ್ಷ ವಿರೋಧಿ ಚಟುವಟಿಕೆ ಸಹಿಸಲ್ಲ ಎಂಬ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
Advertisement