ಇನ್ನೂ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ತಪ್ಪಿಸಿರುವುದಾಗಿ ನನ್ನ ಹಾಗೂ ಕೃಷ್ಣ ಭೈರೇಗೌಡರವರ ಬಗ್ಗೆ ಆರೋಪಗಳಿವೆ. ಇದು ಸತ್ಯಕ್ಕೆ ದೂರವಾದ ಮಾತು. ಪಕ್ಷದ ರಾಷ್ಟ್ರೀಯ ನಾಯಕರ ತೀರ್ಮಾನದಿಂದ ಪಕ್ಷ ಅಧಿಕಾರ ನಡೆಸುತ್ತಿದೆ. ಸಚಿವರ ಸ್ಥಾನಗಳನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ, ಸಂಪುಟ ವಿಸ್ತರಣೆ ನಂತರ ಕೆಲವು ನಾಯಕರಲ್ಲಿ ಅಸಮಾಧಾನ ಇರುವುದು ನಿಜ, ಆದರೆ ಅದಕ್ಕೆ ನನ್ನ ಹೆಸರು ಲಿಂಕ್ ಮಾಡುವುದು ,ಸರಿಯಲ್ಲ ಎಂದು ಹೇಳಿದ್ದಾರೆ.