ಮಾನ್ಯ ಪ್ರಧಾನ ಮಂತ್ರಿಗಳೇ ಹೇಳಿಕೆಯನ್ನು ನೀಡುವ ಮುನ್ನ ಯೋಜನೆಯ ಸತ್ಯಾಸತ್ಯತೆಯನ್ನು ಅರಿತುಕೊಳ್ಳಿ. ಬೆಳೆ ಸಾಲಮನ್ನಾವು ಪಾರದರ್ಶಕವಾಗಿದ್ದು, ಇತರೆ ರಾಜ್ಯಗಳಿಗೆ ಹೋಲಿಸಿದರೆ ಇಲ್ಲಿ ಆನ್ಲೈನ್ನಲ್ಲಿಯೇ ಮಾಹಿತಿ ಲಭ್ಯವಿದೆ. ರಾಜ್ಯದ ಪ್ರತಿಯೊಬ್ಬರ ತೆರಿಗೆ ಹಣವನ್ನು ವ್ಯವಸ್ಥಿತವಾಗಿ ರೈತರ ಕೈಸೇರುವಂತೆ ನೋಡಿಕೊಳ್ಳಲಾಗುತ್ತಿದೆ. ಪ್ರತಿ ರೈತನು ಕೂಡ ಇದರ ಲಾಭವನ್ನು ಪಡೆಯುತ್ತಾನೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.