ರಾಜ್ಯದ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್-ಜೆಡಿಎಸ್ ಎರಡೂ ಇದೆ. ಅವರ ನಿಲುವನ್ನು ಅವರು ತಿಳಿಸಿದ್ದಾರೆ. ಅದರಲ್ಲಿ ಯಾವುದೇ ತಪ್ಪೂ ಇಲ್ಲ. ಆದರೆ, ಅವರು ಕೇಳಿದ ಮಾತ್ರಕ್ಕೆ ನಾವು ಮಾತನಾಡುವುದು ಸರಿಯಲ್ಲ. ಅದಕ್ಕೆಲ್ಲಾ ಹೈಕಮಾಂಡ್ ಇದೆ. ದೆಹಲಿ ಮಟ್ಟದಲ್ಲಿ ಚರ್ಚೆ ನಡೆದ ಬಳಿಕ ಯಾರಿಗೆ ಎಷ್ಟು ಸೀಟು, ಯಾವ ಕ್ಷೇತ್ರ ಎಂಬ ಮಾಹಿತಿ ಹೊರ ಬೀಳುತ್ತದೆ. ಪ್ರಜಾಪ್ರಭುತ್ವದ ಒಳಿತಿಗಾಗಿ ನಾವೆಲ್ಲಾ ಒಂದಾಗಬೇಕಿದೆ. ಈ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆಂದಿದ್ದಾರೆ.