ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಎಸ್ ವೈ, "ರಾಜಕೀಯ ಲಾಭಕ್ಕಾಗಿ ಈ ರೀತಿ ಕೊಲೆಗಳಾಗುತ್ತಿದ್ದು, ಈ ಹಿಂದೆ ದೀಪಕ್ ರಾವ್ ಹತ್ಯೆಯಾಯ್ತು, ಈಗ ಸಂತೋಷ್ ಹತ್ಯೆಯಾಗಿದೆ. ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬೇಜವಾಬ್ದಾರಿತನ ಇದೆ. ಇಂತಹ ಅಮಾನುಷ ಕೃತ್ಯವನ್ನು ನಾನು ಖಂಡಿಸುತ್ತೇನೆ. ಸಿದ್ದರಾಮಯ್ಯ ಸರ್ಕಾರ ಸ್ವಾರ್ಥಕ್ಕಾಗಿ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದು, ಸಿದ್ದರಾಮಯ್ಯನವರಿಗೆ ಸೌಜನ್ಯ ಕನಿಕರ ಇಲ್ಲ. ಸಿಎಂ ಆಗಿ ಅವರು ಬೇಜವಬ್ದಾರಿ ತೋರುತ್ತಿದ್ದಾರೆ ಎಂದು ಎಂದು ವಾಗ್ದಾಳಿ ನಡೆಸಿದ್ದಾರೆ.