ಈ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಯುಟಿ ಖಾದರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಕಾರ್ಯಕರ್ತ ಸಂತೋಷ್ ಹತ್ಯೆ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ಟಾರ್ಗೆಟ್ ಮಾಡಿಕೊಂಡಿದ್ದು, ಪ್ರತಿಯೊಂದಕ್ಕೂ ಅವರನ್ನು ದೂಷಿಸುವುದು ಸರಿಯಲ್ಲ ಎಂದು ಖಾದರ್ ಹೇಳಿದ್ದಾರೆ. " ಸುಮಾರು ನಾಲ್ಕು ವರ್ಷಗಳ ಬಳಿಕ ಸಿಎಂ ತಮ್ಮ ನಿವಾಸಕ್ಕೆ ಆಗಮಿಸಿದ್ದಾರೆ. ಹೀಗಾಗಿ ಅವರಿಗಾಗಿ ಔತಣಕೂಟ ಏರ್ಪಡಿಸಿದ್ದೆನೇ ಹೊರತು ಇನ್ನಾವುದೇ ವಿಚಾರಕ್ಕೂ ಅಲ್ಲ. ಸುಖಾ ಸುಮ್ಮನೆ ಸಿಎಂ ವಿರುದ್ಧ ಆರೋಪ ಸರಿಯಲ್ಲ. ನಮ್ಮ ಮನೆಯ ಊಟ, ಸೌಹಾರ್ಧ ಕೂಟಕ್ಕೂ ನಾವು ಬಿಜೆಪಿಯವರ ಅನುಮತಿ ಪಡೆಯಬೇಕೇ..? ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ ಮಾಡಲು ಅವರ ಬಳಿ ಏನೂ ಇಲ್ಲ. ಈ ಕಾರಣಕ್ಕಾಗಿ ಅವರು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ನಾಯಕರಿಗೆ ನೈತಿಕತೆಯೇ ಇಲ್ಲ. ಕಳೆದ ನಾಲ್ಕು ತಿಂಗಳಿನಿಂದ ಯಾವ ಯಾವ ಹತ್ಯೆಯಾಗಿದೆ ಎಂಬುದನ್ನು ಲೆಕ್ಕ ಹಾಕಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ನಿನ್ನೆಯ ಔತಣಕೂಟದ ಆರೋಪಗಳಿಗೆ ಮಹತ್ವ ಕೊಡುಪ ಅಗತ್ಯ ಇಲ್ಲ ಎಂದು ಯುಟಿ ಖಾದರ್ ಬಿಜೆಪಿ ಮುಖಂಡರಿಗೆ ತಿರುಗೇಟು ನೀಡಿದ್ದಾರೆ.