ಕೋಟಿಗಟ್ಟಲೆ ಹಣ ಲೂಟಿ ಮಾಡಲು ಕಾಂಗ್ರೆಸ್ ಸರ್ಕಾರ ಸ್ಟೀಲ್ ಬ್ರಿಡ್ಜ್ ಷಡ್ಯಂತ್ರ ರೂಪಿಸಿತ್ತು, ಆದರೆ ರಾಜ್ಯದ ಜನತೆ ಹಾಗೂ ಪ್ರತಿಪಕ್ಷದ ಒತ್ತಡಕ್ಕೆ ಮಣಿದು ಹಿಂದೆ ಸರಿಯಿತು, ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಮಂಜೂರು ಮಾಡಲಾಗಿದ್ದ 247ಕೋಟಿ ರೂಪಾಯಿ ಪೈಕಿ ರಾಜ್ಯ ಸರ್ಕಾರ 70 ಕೋಟಿಯಷ್ಟು ಹಣವನ್ನು ಖರ್ಚು ಮಾಡಿಲ್ಲ, ಸ್ಮಾರ್ಟ್ ಸಿಟಿ ಯೋಜನೆಗಾಗಿ 836 ಕೋಟಿ ಅನುದಾನ ನೀಡಲಾಗಿದ್ದು 143 ಕೋಟಿ ಯಷ್ಟು ಕಾಮಗಾರಿ ಆರಂಭವಾಗಿದೆಯಷ್ಟೇ, ಕೃಷಿ, ಶೌಚಾಲಯ, ಬಡವರಿಗೆ ಮನೆ ನಿರ್ಮಾಣ ಸೇರಿದಂತೆ ಯಾವುದರಲ್ಲಿಯೂ ರಾಜ್ಯ ಸರ್ಕಾರಕ್ಕೆ ಕಾಳಜಿ, ಬದ್ಧತೆ ಇಲ್ಲ ಇನ್ನು ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಅತ್ಯಂತ ಕಡಿಮೆ ಖರ್ಚು ಮಾಡಿರುವ ದಕ್ಷಿಣ ಭಾರತದ ರಾಜ್ಯ ಕರ್ನಾಟಕವಾಗಿದೆ ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.