ಇದೇ ವೇಳೆ ಮಹದಾಯಿ ವಿವಾದ ಸಂಬಂಧ ಪ್ರಧಾನಿ ಮೋದಿ ಮೌನವಹಿಸಿರುವ ಹಿನ್ನಲೆಯಲ್ಲಿ ತೀವ್ರವಾಗಿ ಕಿಡಿಕಾರಿರುವ ಅವರು, ಮಹದಾಯಿ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ರಾಜ್ಯ ಸರ್ಕಾರ ಹಲವು ಬಾರಿ ಪ್ರಧಾನಿಮಂತ್ರಿಗಳ ಬಳಿ ಮನವಿ ಮಾಡಿಕೊಂಡಿದೆ. ಆದರೆ, ರಾಜ್ಯಕ್ಕೆ ಆಗಮಿಸಿದ್ದರೂ. ಮಹದಾಯಿ ವಿಚಾರದ ಬಗ್ಗೆ ಮೋದಿಯವರು ಒಂದು ಮಾತನ್ನು ಆಡಿಲ್ಲ ಎಂದು ತಿಳಿಸಿದ್ದಾರೆ.