2008ರ ವಿಧಾನಸಭಾ ಚುನಾವಣೆಯಲ್ಲಿ ಆನಂದ್ ಸಿಂಗ್ ವಿರುದ್ಧ ಸ್ಪರ್ಧಿಸಿ ಗವಿಯಪ್ಪ ಅವರು ಪರಾಭವಗೊಂಡಿದ್ದರು. ದೆಹಲಿಯಲ್ಲಿನ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಸಚಿವಾರದ ಅನಂತ್ ಕುಮಾರ್, ಡಿ.ವಿ. ಸದಾನಂದ ಗೌಡ, ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜವಡೇಕರ್ ಮತ್ತು ಬಳ್ಳಾರಿ ಸಂಸದ ಶ್ರೀ ರಾಮುಲು ಅವರ ಸಮ್ಮುಖದಲ್ಲಿ ಇಬ್ಬರೂ ನಾಯಕರು ಬಿಜೆಪಿಗೆ ಸೇರ್ಪಡೆಗೊಂಡರು, ಜವಡೇಕರ್ ಅವರು ಇಬ್ಬರು ನಾಯಕರಿಗೂ ಪಕ್ಷದ ಪ್ರಾಥಮಿತ ಸದಸ್ಯತ್ವ ನೀಡಿದರು.