ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿಯವರು, ಬಿಜೆಪಿ ನಾಯಕರ ಆರೋಪ ಆಧಾರ ರಹಿತವಾದದ್ದು. ಪ್ರಸ್ತುತ ಅವರು ನನ್ನ ವಿರುದ್ಧ ಮಾಡುತ್ತಿರುವ ಆರೋಪಗಳೆಲ್ಲವೂ ಸುಳ್ಳು. ಕನಕಗಿರಿಯಲ್ಲಿ ದೇವರ ದರ್ಶನಕ್ಕೆ ಹೋಗುವ ಮುನ್ನ ನಾನು ಯಾವುದೇ ಮಾಂಸಾಹಾರ ಸೇವನೆ ಮಾಡಿರಲಿಲ್ಲ. ಬಿಜೆಪಿ ಹಾಗೂ ಸಂಘ ಪರಿವಾರದವರು ಈ ದೇಶದಲ್ಲಿ ಎಲ್ಲವನ್ನು ತಮ್ಮ ಚಿಂತನೆಯ ಹಿನ್ನೆಲೆಯಾಗಿಟ್ಟುಕೊಂಡೇ ನೋಡುವ ಪ್ರಯತ್ನ ಮಾಡುತ್ತಿದ್ದಾರೆ. ಇದನ್ನು ಜನ ನಂಬುವುದಿಲ್ಲ ಎಂದು ಹೇಳಿದ್ದಾರೆ.