ಮಂಗಳವಾರ ನಗರದಲ್ಲಿ ಕದಿರೇಶ್ ಹತ್ಯೆ ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿರುವ ಬಿಜೆಪಿ ಪ್ರಧಾನಕಾರ್ಯದರ್ಶಿ ಎನ್. ರವಿಕುಮಾರ್ ಅವರು, ರಾಜ್ಯದಲ್ಲಿ ನಿರಂತರವಾಗಿ ಆರ್'ಎಸ್ಎಸ್, ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರನ್ನೇ ಗುರಿಯಾಗಿಸಿ ಹತ್ಯೆ ಮಾಡಲಾಗುತ್ತಿದೆ. ಈ ಹತ್ಯೆಗಳ ಹಿಂದೆ ಕಾಂಗ್ರೆಸ್ ಹಿರಿಯ ನಾಯಕರು ಹಾಗೂ ಕೆಲ ಸಚಿವರುಗಳ ಕೈವಾಡವಿದೆ ಎಂದು ಆರೋಪಿಸಿದ್ದಾರೆ.