ನನ್ನ ಗುರು ಎಚ್ ಡಿ ದೇವೇಗೌಡ ಅಲ್ಲ ರಾಮಕೃಷ್ಣ ಹೆಗಡೆ: ಸಿಎಂ ಸಿದ್ದರಾಮಯ್ಯ

ನನ್ನ ರಾಜಕೀಯ ಗುರು ಎಚ್ ಡಿ ದೇವೇಗೌಡ ಅಲ್ಲ.. ರಾಮಕೃಷ್ಣ ಹೆಗಡೆ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಬೆಂಗಳೂರು: ನನ್ನ ರಾಜಕೀಯ ಗುರು ಎಚ್ ಡಿ ದೇವೇಗೌಡ ಅಲ್ಲ.. ರಾಮಕೃಷ್ಣ ಹೆಗಡೆ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.
ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಬುಧವಾರ ಶಾಸಕರ ಭವನದ ಆವರಣದಲ್ಲಿ ಶಾಸಕರ ಸಾಂಸಾರಿಕ ಕೊಠಡಿ ಕಟ್ಟಡ ಉದ್ಘಾಟನೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನು ರಾಜಕೀಯವಾಗಿ ಇಷ್ಟು ಎತ್ತರಕ್ಕೆ  ಬೆಳೆದಿದ್ದು ದೇವೇಗೌಡರಿಂದಾಗಿ ಅಲ್ಲ, ರಾಮಕೃಷ್ಣ ಹೆಗಡೆ ಅವರು ನನ್ನನ್ನು ಬೆಳೆಸಿದರು. ಅನಂತರ ನನ್ನ ಸ್ವಂತ ಸಾಮರ್ಥ್ಯದಿಂದ ಬೆಳೆದು ಮುಖ್ಯಮಂತ್ರಿಯಾಗಿದ್ದೇನೆ ಎಂದು ಹೇಳಿದರು. 
"ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಅವರೇ ಹೊರತು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರಲ್ಲ.  1983ರಲ್ಲಿ ಸ್ವಂತ ಬಲದಿಂದ ಗೆದ್ದು ಬಂದೆ. ಆಗ ದೇವೇಗೌಡರು ಯಾರು  ಎಂಬುದೇ ನನಗೆ ಗೊತ್ತಿರಲಿಲ್ಲ. ಎರಡು ಬಾರಿ ಯಾರ ಹಂಗಿಲ್ಲದೇ ಚುನಾವಣೆಯಲ್ಲಿ ಗೆಲವು ಸಾಧಿಸಿದ್ದೆ. ರಾಮಕೃಷ್ಣ ಹೆಗಡೆ ಅವರು ತಮ್ಮ ಸಂಪುಟದಲ್ಲಿ ನನ್ನನ್ನು ಸಚಿವರಾಗಿ ಮಾಡಿದ್ದರು. ನಂತರ ನನಗೂ ಹೆಗಡೆ ಅವರ ನಡುವಿನ  ಮನಸ್ತಾಪದಿಂದ ನನ್ನನ್ನು ವಜಾ ಮಾಡಿದರು. ಬಳಿಕ ನನ್ನನ್ನು ದೇವೇಗೌಡರು ಕರೆದುಕೊಂಡು ಹೋದರು ಎಂದು ಸಿದ್ದರಾಮಯ್ಯ ಹೇಳಿದರು.
ಬೇರೆಯವರ ಬೆಳವಣಿಗೆಯನ್ನು ದೇವೇಗೌಡ ಮತ್ತು ಅವರ ಕುಟುಂಬ ಸಹಿಸುವುದಿಲ್ಲ
ಇದೇ ವೇಳೆ ಪಕ್ಕದಲ್ಲಿಯೇ ಇದ್ದ ಬಸವರಾಜ ಹೊರಟ್ಟಿ ಹಾಗೂ ಶ್ರೀಕಂಠೇಗೌಡರ ಕುರಿತು ಮಾತನಾಡಿದ ಅವರು, ಈ ಇಬ್ಬರ ಮಧ್ಯದಲ್ಲಿ ನಾನು ಸಿಕ್ಕಿಹಾಕಿಕೊಂಡಿಲ್ಲ. ಅವರ ಮಧ್ಯೆ ಸಿಕ್ಕಿಕೊಂಡಿದ್ದರೆ ಇಷ್ಟು ಎತ್ತರಕ್ಕೆ  ಬೆಳೆಯುತ್ತಿರಲಿಲ್ಲ. ನಿಮ್ಮಿಬ್ಬರ ಮಧ್ಯೆ ಉಳಿಯದೆ ನಾನು ಸೇಫ್‌ ಆದೆ. ಆದರೆ, ಸಿದ್ದರಾಮಯ್ಯನವರನ್ನು ಬೆಳೆಸಿದ್ದು ನಾನು ಎಂದು ದೇವೇಗೌಡರು ಹೇಳುತ್ತಾರಲ್ಲ. ನನ್ನಂತಹ ನಾಲ್ಕು ಮಂದಿಯನ್ನು ಬೆಳೆಸಲಿ ನೋಡೋಣ.  ಅವರದ್ದು ಕುಟುಂಬ ರಾಜಕಾರಣ. ಬೇರೆಯವರು ಬೆಳೆಯುವುದನ್ನು ದೇವೇಗೌಡರ ಕುಟುಂಬ ಸಹಿಸುವುದಿಲ್ಲ ಎಂದು ಟೀಕಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com