ಬಸವಣ್ಣನವರ 'ನುಡಿದಂತೆ ನಡೆ' ತತ್ವ ಪಾಲಿಸದ ಮೋದಿ: ರಾಹುಲ್ ಗಾಂಧಿ ವ್ಯಂಗ್ಯ

21ನೇ ಶತಮಾನದ ಸಮಾಜ ಸುಧಾರಕ ಬಸವಣ್ಣವರ ವಚನಗಳನ್ನು ಸಂಸತ್ತಿನಲ್ಲಿ ಹಾಗೂ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರ್ಯಾಲಿಗಳಲ್ಲಿ ಪಠಿಸಿದ ಮೋದಿ ...
ಜನಾಶೀರ್ವಾದ ಯಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ರಾಹುಲ್ ಗಾಂಧಿ
ಜನಾಶೀರ್ವಾದ ಯಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ರಾಹುಲ್ ಗಾಂಧಿ
Updated on
ಅಥಣಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. 
21ನೇ ಶತಮಾನದ ಸಮಾಜ ಸುಧಾರಕ ಬಸವಣ್ಣವರ ವಚನಗಳನ್ನು ಸಂಸತ್ತಿನಲ್ಲಿ ಹಾಗೂ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರ್ಯಾಲಿಗಳಲ್ಲಿ ಪಠಿಸಿದ ಮೋದಿ ಅವರ ತತ್ವಗಳನ್ನು ಪಾಲಿಸುತ್ತಿಲ್ಲ, ನುಡಿದಂತೆ ನಡೆಯದೇ ಬಸವಣ್ಣನ ತತ್ವಾದರ್ಶಗಳನ್ನು ಉಲ್ಲಂಘಿಸುತ್ತಿದ್ದಾರೆ, ಬಸವಣ್ಣನವರ ಹೆಸರಿನಲ್ಲಿ ಜನರನ್ನು ಓಲೈಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 
ಕಾಂಗ್ರೆಸ್ ಜನಾಶೀರ್ವಾದ ಯಾತ್ರೆ ಸಮಾವೇಶದಲ್ಲಿ ಭಾಷಣ ಮಾಡಿದ ಅವರು, ನಾವು ಕರ್ನಾಟಕದಲ್ಲಿ ಬಸವಣ್ಣನವರ ತತ್ವದಡಿ ಸರ್ವರ ಅಭಿವೃದ್ಧಿ ಮಾಡಿದ್ದೇವೆ.
"ಕಳಬೇಡ ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ" ಐದು ತತ್ವಗಳಡಿ ನಾವು ಕೆಲಸ ಮಾಡುತ್ತೇವೆ ಎಂದಿದ್ದಾರೆ,
ಬಸವಣ್ಣನವರ ವಚನ ಬಳಸುವ ಮೋದಿ, ನುಡಿದಂತೆ ನಡೆದಿಲ್ಲ. ನೀವು ಕೇವಲ ವೋಟಿಗಾಗಿ ಬಸವಣ್ಣನವರ ಹೆಸರು ಹೇಳುತ್ತಿದ್ದೀರಾ ಎಂದು ರಾಹುಲ್‌ ಪ್ರಶ್ನಿಸಿದರು.
ಮೋದಿಯವರು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತೇನೆ, 15 ಲಕ್ಷ ಪ್ರತಿಯೊಬ್ಬರಿಗೆ ಕೊಡುತ್ತೇನೆ ಎಂದಿದ್ದರು. ಆದರೆ, ಕೊಡಲಿಲ್ಲ ಎಂದು ದೂರಿದರು.ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ ಅಪರಾಧಗಳ ಸಂಖ್ಯೆಗಣನೀಯವಾಗಿ ಹೆಚ್ಚುತ್ತಿದೆ. ಅಮಿತ್ ಶಾ ಮತ್ತು ಮೋದಿ ಅದರ ಬಗ್ಗೆ ಗಮನ ಕೊಡದೇ ಕರ್ನಾಟಕದಲ್ಲಿನ ಸಣ್ಣ ವಿಷಯಗಳನ್ನು ದೊಡ್ಡದು ಮಾಡುತ್ತಿದ್ದಾರೆ ಎಂದು ದೂರಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com