ಬಿಜೆಪಿ ಅಧಿಕಾರಕ್ಕೆ ಬಂದರೆ ಕರ್ನಾಟಕಕ್ಕೆ ಮಹದಾಯಿ ನೀರು: ಅಮಿತ್‌ ಶಾ

ಕೊನೆಗೂ ಮಹದಾಯಿ ವಿಚಾರ ಪ್ರಸ್ತಾಪಿಸಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ....
ಅಮಿತ್ ಶಾ
ಅಮಿತ್ ಶಾ
Updated on
ಕಲಬುರಗಿ: ಕೊನೆಗೂ ಮಹದಾಯಿ ವಿಚಾರ ಪ್ರಸ್ತಾಪಿಸಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕದ ಜನತೆಗೆ ಮಹದಾಯಿ ನೀರು ಸಿಗಲಿದೆ ಎಂದು ಸೋಮವಾರ ಹೇಳಿದ್ದಾರೆ.
ಏಪ್ರಿಲ್ -ಮೇ ತಿಂಗಳಲ್ಲಿ ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬಂದರೆ ಗೋವಾದೊಂದಿಗಿನ ಮಹದಾಯಿ ವಿವಾದವನ್ನು ಬಗೆಹರಿಸುತ್ತೇನೆ ಎಂದು ನಾನು ಕರ್ನಾಟಕ ಜನತೆಗೆ ಗ್ಯಾರಂಟಿ ಕೊಡುತ್ತೇನೆ ಎಂದಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬಂದರೆ ಮಹದಾಯಿ ಸೇರಿದಂತೆ ಕರ್ನಾಟಕದ ರೈತರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ ಅಮಿತ್ ಶಾ, ಮಹದಾಯಿ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರ ಸೂಕ್ತವಾಗಿ ನಿರ್ಧಾರ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.
ಇದೇ ವೇಳೆ ಹಿಂದುತ್ವದ ಬಗ್ಗೆ ಬಿಜೆಪಿ ಕಾಂಟ್ರಾಕ್ಟ್ ಪಡೆದಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ 'ನೋ ಕಮೆಂಟ್ಸ್' ಎಂದ ಅವರು, ಮಠ‌ ಮಾನ್ಯಗಳನ್ನು ಸಿದ್ದರಾಮಯ್ಯ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ರಾಜ್ಯದಲ್ಲಿ ಹಿಂದೂಗಳ ಹತ್ಯೆ ನಿರಂತರವಾಗಿ‌ ನಡೆಯುತ್ತಿದೆ. ಇದರ ಬಗ್ಗೆ ಸಿದ್ದರಾಮಯ್ಯ ಚಕಾರ ಎತ್ತುತ್ತಿಲ್ಲ, ಈ ಘಟನೆಗಳನ್ನು ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹೇಗಿದೆ ಎಂದು ಗೊತ್ತಾಗುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com