ಸಾರ್ವಜನಿಕ ಹಣ ಲೂಟಿ ಮಾಡಿ ನೀರವ್ ಮೋದಿ ದೇಶ ಬಿಟ್ಟು ಹೇಗೆ ಹೋದರು ಎಂದು ನರೇಂದ್ರ ಮೋದಿ ವಿವರಿಸಬೇಕು: ರಾಹುಲ್ ಗಾಂಧಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ...
ಮುಧೋಳದಲ್ಲಿ ರ್ಯಾಲಿಯಲ್ಲಿ ಸಾರ್ವಜನಿಕರತ್ತ ಕೈಬೀಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ
ಮುಧೋಳದಲ್ಲಿ ರ್ಯಾಲಿಯಲ್ಲಿ ಸಾರ್ವಜನಿಕರತ್ತ ಕೈಬೀಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ

ಮುಧೋಳ: ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸಾರ್ವಜನಿಕ ಹಣವನ್ನು ಲೂಟಿ ಮಾಡಿದ ನಂತರ ತನ್ನ ಮೂಗಿನ ನೇರಕ್ಕೆ ಉದ್ಯಮಿ ನೀರವ್ ಮೋದಿ ದೇಶ ಬಿಟ್ಟು ಹೋದರು ಎಂಬುದನ್ನು ಈ ದೇಶದ ಪ್ರಧಾನ ಸೇವಕರಾಗಿರುವ ಪ್ರಧಾನಿ ನರೇಂದ್ರ ಮೋದಿ ವಿವರಿಸಬೇಕು ಎಂದು ಹೇಳಿದರು.

ಜನಾಶೀರ್ವಾದ ಯಾತ್ರೆಯ ಎರಡನೇ ದಿನ ಅವರು ನಿನ್ನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ ಮಾತನಾಡಿ, ಮೋದಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿಲ್ಲ ಎಂದು ಆರೋಪಿಸಿದರು.
ಕೋಟ್ಯಂತರ ರೂಪಾಯಿ ಸಾರ್ವಜನಿಕ ಹಣವನ್ನು ಲೂಟಿ ಮಾಡಿದ ನೀರವ್ ಮೋದಿ ತಮ್ಮಿಚ್ಛೆಯಂತೆ ದೇಶ ಬಿಟ್ಟು ಹೋದರು ಎಂಬುದನ್ನು ಪ್ರಧಾನಿ ಮೋದಿಯವರು ವಿವರಿಸಬೇಕು ಎಂದರು.

12ನೇ ಶತಮಾನದ ಸಮಾಜ ಸುಧಾರಕ, ಕ್ರಾಂತಿಕಾರ ಬಸವಣ್ಣನವರ ವಚನಗಳ ಮೂಲಕ ಮೋದಿ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಬಸವಣ್ಣನವರ ನುಡಿದಂತೆ ನಡೆ ಮತ್ತು ಕಾಯಕವೇ ಕೈಲಾಸ ವಚನಗಳನ್ನು ಪ್ರಸ್ತಾಪಿಸಿದರು.

ಕಾರ್ಪೊರೇಟ್ ಉದ್ಯಮಿಗಳ ಪರವಾಗಿ ಮೋದಿ ಸರ್ಕಾರವಿದೆ ಎಂದು ಹರಿಹಾಯ್ದ ಅವರು, ಕೈಗಾರಿಕೋದ್ಯಮಿಗಳ 1.4 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡುವುದರಲ್ಲಿ ಮೋದಿ ಸರ್ಕಾರಕ್ಕೆ ಯಾವುದೇ ಸಮಸ್ಯೆಯುಂಟಾಗಲಿಕ್ಕಿಲ್ಲ. ಅದೇ ರೈತರ ಸಾಲ ಮನ್ನಾ ಮಾಡುವುದೆಂದರೆ ದೇಶದ ಆರ್ಥಿಕತೆಗೆ ಹೊಡೆತ ಬೀಳಬಹುದು ಎಂದು ಭಾವಿಸಬಹುದು ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com