ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಯೋಗಿ ಆದಿತ್ಯನಾಥ್ ಅವರು, ಆದರದ ಸ್ವಾಗತ ಕೋರಿರುವುದಕ್ಕೆಧನ್ಯವಾದಗಳು ಮುಖ್ಯಮಂತ್ರಿ ಸಿದ್ದರಾಮಯ್ಯಜೀ. ನಿಮ್ಮ ಆಳ್ವಿಕೆಯಲ್ಲಿಯೇ ಕರ್ನಾಟಕದಲ್ಲಿ ಅತೀ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣಗಳು ನಡೆದಿವೆ ಎಂದು ಕೇಳಲ್ಪಟ್ಟೆ. ಪ್ರಾಮಾಣಿಕ ಅಧಿಕಾರಿಗಳ ವರ್ಗಾವಣೆ ಹಾಗೂ ಸಾವಿನ ಪ್ರಕರಣಗಳನ್ನು ನಮೂದಿಸಬೇಡಿ. ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ನಿಮ್ಮ ಮಿತ್ರಪಕ್ಷಗಳು ಮಾಡಿರುವ ಕೊಳಕನ್ನು ಸ್ವಚ್ಛಗೊಳಿಸಲು ನಾನು ಕೆಲಸ ಮಾಡುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.