ನನ್ನ ಮಗ ವಿಕ್ರಂ ಪಾಟೀಲ್ ಗೆ ಟಿಕೆಟ್ ಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಈಗ ಟಿಕೆಟ್ ಕೇಳಿದ್ರೆ, ಉಸ್ತುವಾರಿ ಸಚಿವರ ಪತ್ರ ತನ್ನಿ ಎಂದು ಹೇಳುತ್ತಾರೆ. ಆದರೆ ಧರಂಸಿಂಗ್, ಮಲ್ಲಿಕಾರ್ಜುನ ಖರ್ಗೆ ಮಕ್ಕಳಿಗೆ ಮಾತ್ರ ಟಿಕೆಟ್ ಕೊಡುತ್ತಾರೆ. ಅಷ್ಟೇ ಅಲ್ಲ ಪರಂ, ಸಿಎಂನಿಂದಾಗಿ ಹೈದರಾಬಾದ್ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.