ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಸುಬ್ಬರಾಯನಹಳ್ಳಿ ಮತ್ತು ತಿಮ್ಮಪ್ಪನಗುಡಿ ಪ್ರದೇಶದಲ್ಲಿ 5,450 ಕೋಟಿ ರುಪಾಯಿ ಮೌಲ್ಯದ ಅಕ್ರಮ ಗಣಿಗಾರಿಕೆ ನಡೆದಿದೆ. ರಾಜ್ಯ ಸರ್ಕಾರದ ಒಡೆತನದ ಮೈಸೂರು ಮಿನರಲ್ಸ್ ಲಿಮೆಟೆಡ್(ಎಂಎಂಎಲ್) ಮೂಲಕ ಗಣಿಗಾರಿಕೆ ಗುತ್ತಿಗೆ ಪಡೆದಿರುವ ಕಂಪೆನಿಗಳು ಒಪ್ಪಂದದ ಪ್ರಕಾರ ವರ್ಷಕ್ಕೆ 30 ಲಕ್ಷ ಟನ್ ಅದಿರು ತೆಗೆಯಲು ಅನುಮತಿ ಪಡೆದಿವೆ. ಆದರೆ, 2014–15ರಿಂದ 2016–17ರವರೆಗೆ ಹೆಚ್ಚುವರಿಯಾಗಿ 60,56,440 ಟನ್ ಅದಿರು ತೆಗೆದು ಸಾಗಣೆ ಮಾಡಲಾಗಿದೆ ಎಂದು ಆರೋಪಿಸಿದರು.