ಕಾರವಾರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಆನಂದ್ ಆಸ್ನೋಟಿಕರ್ ಉತ್ತರ ಕನ್ನಡ ಜಿಲ್ಲೆಯ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದಾರೆ.ಿದಕ್ಕೂ ಕೆಲ ದಿನಗಳ ಹಿಂದೆ ಬಿಜೆಪಿ ತೊರೆಯುವ ಬಗೆಗೆ ತಮ್ಮ ಕಾರ್ಯಕರ್ತರು, ಬೆಂಬಲಿಗರಿಗೆ ಸೂಚನೆ ನೀಡಿದ್ದ ಆಸ್ನೋಟಿಕರ್ ಇಂದು ಬೆಂಗಳೂರಿನ ದೇವೇಗೌಡರ ನಿವಾಸದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜೆಡಿಎಸ್ ಗೆ ಸೇರ್ಪಡೆ ಆಗಿದ್ದಾರೆ.