ಕಾಂಗ್ರೆಸ್ 70 ವರ್ಷದಿಂದ ಹಿಂದೂ ಧರ್ಮವನ್ನು ರಕ್ಷಿಸಿದೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಯವರು ಮಾತ್ರ ಹಿಂದೂ ಧರ್ಮದ ರಕ್ಷಕರಾ? ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಳೆದ 70 ವರ್ಷದಿಂದ ಕಾಂಗ್ರೆಸ್ ಹಿಂದೂ ಧರ್ಮದ ರಕ್ಷಣೆ ಮಾಡಿದೆ ಎಂದು ಮಂಗಳವಾರ ತಿರುಗೇಟು ನೀಡಿದ್ದಾರೆ...
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿಯವರು ಮಾತ್ರ ಹಿಂದೂ ಧರ್ಮದ ರಕ್ಷಕರಾ? ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಳೆದ 70 ವರ್ಷದಿಂದ ಕಾಂಗ್ರೆಸ್ ಹಿಂದೂ ಧರ್ಮದ ರಕ್ಷಣೆ ಮಾಡಿದೆ ಎಂದು ಮಂಗಳವಾರ ತಿರುಗೇಟು ನೀಡಿದ್ದಾರೆ.
ಇಂದು ಕೆಪಿಸಿಸಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ, ಚುನಾವಣೆ ಬಂದಾಗ ಮಾತ್ರ ಬಿಜೆಪಿಯವರು ಹಿಂದೂತ್ವ ಎನ್ನುತ್ತಾರೆ. ಬಿಜೆಪಿಯವರಿಗೆ ಈಗ ಏನೂ ಉಳಿದಿಲ್ಲ, ಹಿಂದೂತ್ವ ಒಂದೇ ಉಳಿದಿರುವುದು ಎಂದು ವ್ಯಂಗ್ಯವಾಡಿದರು.
ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಾವು ಸುಳ್ಳು ಹೇಳೋದು ಬೇಡ, ಸತ್ಯವನ್ನೇ ಹೇಳೋಣ, ಸುಳ್ಳು ಹೇಳೋದು ಬಿಜೆಪಿಯವರ ಕೆಲಸ ಎಂದು ಆರೋಪಿಸಿದರು.
ಬಿಜೆಪಿಯವರ ಆರೋಪಕ್ಕೆ ನಾವು ಕಟುವಾಗಿ ತಿರುಗೇಟು ನೀಡಬೇಕು. ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರಿಗೆ ಕಾರ್ಯಾಗಾರ ಮಾಡಬೇಕು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com