ಇಬ್ಬರು ಜೆಡಿಎಸ್ ಶಾಸಕರು ರಾಜಿನಾಮೆ, ಬಿಜೆಪಿ ಸೇರ್ಪಡೆಗೆ ಸಿದ್ಧತೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಆರಂಭವಾಗಿದ್ದು, ಇಬ್ಬರು ಜೆಡಿಎಸ್ ಶಾಸಕರು....
ಮಾನಪ್ಪ ವಜ್ಜಲ್
ಮಾನಪ್ಪ ವಜ್ಜಲ್
ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಆರಂಭವಾಗಿದ್ದು, ಇಬ್ಬರು ಜೆಡಿಎಸ್ ಶಾಸಕರು ಗುರುವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದಾರೆ.
ಲಿಂಗಸೂರು ಜೆಡಿಎಸ್ ಶಾಸಕ ಮಾನಪ್ಪ ವಜ್ಜಲ್ ಹಾಗೂ ರಾಯಚೂರು ನಗರ ಶಾಸಕ ಡಾ.ಎಸ್ ಶಿವರಾಜ್ ಪಾಟೀಲ್ ಅವರು ಇಂದು ಸ್ಪೀಕರ್ ಕೆ.ಬಿ.ಕೋಳಿವಾಡ್ ಅವರು ಕಚೇರಿಯಲ್ಲಿಲ್ಲದ ಕಾರಣ ವಿಧಾಸಭೆ ಕಾರ್ಯದರ್ಶಿ ಎಸ್ ಮೂರ್ತಿ ಅವರಿಗೆ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ.
ರಾಜಿನಾಮೆ ಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ಬರು ಶಾಸಕರು, ಜೆಡಿಎಸ್ ನಾಯಕರು ಕಳೆದ ಒಂದು ವರ್ಷದಿಂದ ತಮ್ಮನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಹಲವು ಸಂದರ್ಭಗಳಲ್ಲಿ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ನಿರ್ಲಕ್ಷಿಸಲಾಗಿದೆ. ಪಕ್ಷದ ನಾಯಕರು ನಮ್ಮ ಯಾವುದೇ ಸಮಸ್ಯೆಗೆ ಸ್ಪಂದಿಸುತ್ತಿರಲಿಲ್ಲ. ಹೀಗಾಗಿ ನಾವು ಜೆಡಿಎಸ್ ತೊರೆಯಬೇಕಾಗಿ ಬಂತು ಎಂದಿದ್ದಾರೆ. ಅಲ್ಲದೆ ತಾವು ಬಿಜೆಪಿ ಸೇರವುದಾಗಿ ತಿಳಿಸಿದ್ದಾರೆ.
ಇನ್ನು ವಿಧಾನಸಭೆ ಕಾರ್ಯದರ್ಶಿ ಎಸ್ ಮೂರ್ತಿ ಅವರು ಶಾಸಕರ ರಾಜಿನಾಮೆ ಪತ್ರವನ್ನು ಸ್ಪೀಕರ್ ಗೆ ಕಳುಹಿಸುವುದಾಗಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com