ಮುಖ್ಯಮಂತ್ರಿ ಸಿದ್ದರಾಮಯ್ಯಯನವರು ಸಹಕಾರಿ ಬ್ಯಾಂಕುಗಳಲ್ಲಿ 50,000ಕ್ಕಿಂತ ಕಡಿಮೆ ಸಾಲ ಹೊಂದಿರುವವರ ಸಾಲ ಮನ್ನಾ ಘೋಷಣೆ ಮಾಡಿದ ನಂತರ ಸುಮಾರು 500 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಸಾಲ ಮನ್ನಾ ಘೋಷಣೆ ಕೇವಲ ಕಣ್ಣೊರೆಸುವ ತಂತ್ರವಷ್ಟೆ. ರೈತರ ಕಷ್ಟಗಳನ್ನು ಚೆನ್ನಾಗಿ ಅರ್ಥೈಸಿಕೊಂಡಿರುವ ಬಿಜೆಪಿ ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶಗಳಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ಹೊಂದಿರುವ ರೈತರ ಸಾಲ ಮನ್ನಾ ಮಾಡಿದೆ ಎಂದು ಮುರಳೀಧರ ರಾವ್ ಹೇಳಿದರು.ಸಿದ್ದರಾಮಯ್ಯ ಸರ್ಕಾರ ಬೇಜವಾಬ್ದಾರಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದರು.