ಸಿ.ವಿ.ರಾಮನ್ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಾಸ್ತವವಾಗಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮಹದೇವಪ್ಪ ಅವರ ಹೆಸರು ಅಧಿಕೃತವಾಗಿ ಇರಲಿಲ್ಲ. ಆದರೂ, ಅವರು ಸಮಾರಂಭಕ್ಕೆ ಆಗಮಿಸುವಂತೆ ನೋಡಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಮುಖ್ಯಮಂತ್ರಿಗಳು, ಸಭಿಕರನ್ನು ಉದ್ದೇಶಿಸಿ, ಈ ಕ್ಷೇತ್ರ ಅಭಿವೃದ್ಧಿಯಾಗಬೇಕು ಎಂದರೆ ಯಾರನ್ನು ಗೆಲ್ಲಿಸಬೇಕು ಎಂದು ಪ್ರಶ್ನಿಸಿದರು.