ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆಯೆಂಬ ಕುರುಕ್ಷೇತ್ರ ಯುದ್ಧದಲ್ಲಿ ಕಾಂಗ್ರೆಸ್ನವರು ಪಾಂಡವರ ಪಕ್ಷ, ಬಿಜೆಪಿಯವರು ಕೌರವರ ಪಕ್ಷ ಎಂದು ಹೇಳಿದ್ದಾರೆ. ಆದರೆ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅತಿಹೆಚ್ಚು ಭ್ರಷ್ಟಾಚಾರ, ಅತ್ಯಾಚಾರ, ಹತ್ಯೆಗಳು, ಕೋಮುಗಲಭೆಗಳು ನಡೆದಿವೆ. ಹೀಗಿರುವಾಗ, ಕಾಂಗ್ರೆಸ್ ಪಾಂಡವರ ಪಕ್ಷವಾಗಲು ಹೇಗೆ ಸಾಧ್ಯ ಎಂಬುದನ್ನು ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಶಾಸಕ ಸಿಟಿ ರವಿ ಸವಾಲು ಹಾಕಿದರು.