ವಿಶೇಷವೆಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಎಲ್ಲಾ ಹಿರಿಯ ಕಾಂಗ್ರೆಸ್ ನಾಯಕರನ್ನು ಈ ಸಮಿತಿ ಒಳಗೊಂಡಿದೆ. ಲೋಕಸಭಾ ಸದಸ್ಯರಾದ ಎಂ.ಮಲ್ಲಿಕಾರ್ಜುನ ಖರ್ಗೆ ಸಹ ಈ ಸಮಿತಿ ಸದಸ್ಯರಾಗಿರುತ್ತಾರೆ. ಇನ್ನು ಬಹುತೇಕ ಕಾಂಗ್ರೆಸ್ ನ ಮಾಜಿ ಕೇಂದ್ರ ಮಂತ್ರಿಗಳು, ಕೆಪಿಸಿಸಿ ಮಾಜಿ ಅಧ್ಯಕ್ಷರುಗಳು, ಪಕ್ಷ ಸಂಘಟನೆಗಳ ಮುಖ್ಯಸ್ಥರು, ಎಐಸಿಸಿ ಕಛೇರಿ ಮತ್ತು ಸಂಸತ್ತಿನ ಎರಡೂ ಸದನಗಳ ಸದಸ್ಯರನ್ನು ಒಳಗೊಂಡಂತೆ ಈ ಸಮಿತಿ ರಚನೆಯಾಗಿದೆ.