ಕಾಂಗ್ರೆಸ್ ಜೊತೆ ಸಂಪರ್ಕ ಹೊಂದಿರುವವರು ಹಂತಕರು: ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ

ಕಾಂಗ್ರೆಸ್ ಜೊತಗೆ ಸಂಪರ್ಕ ಹೊಂದಿರುವವರು ಹಂತಕರು ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ಬುಧವಾರ ಹೇಳಿದ್ದಾರೆ...
ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ
ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ
Updated on
ಬೆಂಗಳೂರು: ಕಾಂಗ್ರೆಸ್ ಜೊತಗೆ ಸಂಪರ್ಕ ಹೊಂದಿರುವವರು ಹಂತಕರು ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ಬುಧವಾರ ಹೇಳಿದ್ದಾರೆ. 
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಆರ್'ಎಸ್ಎಸ್ ಹಾಗೂ ಬಿಜೆಪಿಯ 22 ಕಾರ್ಯಕರ್ತರನ್ನು ಹತ್ಯೆ ಮಾಡಿದ ಮುಸ್ಲಿಮರು ಕಾಂಗ್ರೆಸ್ ಜೊತೆಗೆ ಸಂಪರ್ಕವನ್ನು ಹೊಂದಿದವರಾಗಿದ್ದಾರೆ. ಬಿಜೆಪಿ ಜೊತೆಗಿರುವ ಮುಸ್ಲಿಮರು ಒಳ್ಳೆಯವರು ಎಂದು ಹೇಳಿದ್ದಾರೆ. 
ಪಾಪ್ಯುಲರ್ ಫ್ರಂಟ್ ಆಫಾ ಇಂಡಿಯಾ (ಪಿಎಫ್ಐ)ಯನ್ನು ಕಾಂಗ್ರೆಸ್ ಬೆಂಬಲಿಸುತ್ತಿದ್ದು, ತನ್ನ ರಾಜಕೀಯ ಅಸ್ತ್ರವಾಗಿ ಬಳಕೆ ಮಾಡಿಕೊಳ್ಳುತ್ತಿದೆ. ಸೋಷಿಯನ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯದ ಸಂಘ ಪರಿವಾರದ ಕಾರ್ಯಕರ್ತರನ್ನು ಗುರಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. 
ಬಿಜೆಪಿಯು ಎಐಎಂಐಎಂ ಮುಖ್ಯಸ್ಥ ಓವೈಸಿ ಜೊತೆಗೆ ಮೈತ್ರಿ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ಹೇಳುತ್ತಿದೆ. ಇದು ನಿಜವೇ ಆದರೆ, ಈ ಬಗೆಗಿನ ದಾಖಲೆಗಳನ್ನು ಕಾಂಗ್ರೆಸ್ ನಾಯಕರು ಬಹಿರಂಗಪಡಿಸಲಿ ಎಂದಿದ್ದಾರೆ. ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಇದರಲ್ಲಿ ವಿಫಲರಾದರೆ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com