ಜಿ ಪರಮೇಶ್ವರ್ ಮತ್ತು ಕೆ,ಸಿ ವೇಣುಗೋಪಾಲ್
ಜಿ ಪರಮೇಶ್ವರ್ ಮತ್ತು ಕೆ,ಸಿ ವೇಣುಗೋಪಾಲ್

ವೇಣುಗೋಪಾಲ್ -ಪರಮೇಶ್ವರ್ ಭೇಟಿ: ನಿಗಮ ಮಂಡಳಿ ಹಂಚಿಕೆ ಬಗ್ಗೆ ಚರ್ಚೆ

ಮೊದಲನೇ ಹಂತದಲ್ಲಿ 30 ನಿಗಮ ಮಂಡಳಿಗಳಿಗೆ ನೇಮಕ ಮಾಡಿಕೊಳ್ಳುವ ಬಗ್ಗೆ ಸಮನ್ವಯ ಸಮಿತಿ ಪೂರ್ವಭಾವಿ ಸಭೆಯಲ್ಲಿ ಚರ್ಚೆಯಾಗಿದ್ದು, ...
ಬೆಂಗಳೂರು: ಮೊದಲನೇ ಹಂತದಲ್ಲಿ 30 ನಿಗಮ ಮಂಡಳಿಗಳಿಗೆ ನೇಮಕ ಮಾಡಿಕೊಳ್ಳುವ ಬಗ್ಗೆ ಸಮನ್ವಯ ಸಮಿತಿ ಪೂರ್ವಭಾವಿ ಸಭೆಯಲ್ಲಿ ಚರ್ಚೆಯಾಗಿದ್ದು, ಖಾತೆಗಳಿಗೆ ಅನುಸಾರವಾಗಿ ಮಂಡಳಿಗಳನ್ನ ಎರಡು ಪಕ್ಷಗಳು ಹಂಚಿಕೊಳ್ಳುವುದು ಸೂಕ್ತ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್​ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಸಮನ್ವಯ ಸಮಿತಿ ಪೂರ್ವಭಾವಿ ಸಭೆಗೂ ಮುನ್ನ ಕೆ.ಸಿ ವೇಣುಗೋಪಾಲ್ಅವರನ್ನು ಕುಮಾರ ಕೃಪಾ ಅತಿಥಿ ಗೃಹದಲ್ಲಿ ಭೇಟಿ ಮಾಡಿದ ಡಿಸಿಎಂ ಪರಮೇಶ್ವರ್ ಈ ಸಂಬಂಧ ಚರ್ಚಿಸಿದರು. ಜೆಡಿಎಸ್‌ಗೆ 10 ಹಾಗೂ ಕಾಂಗ್ರೆಸ್‌ಗೆ 20 ನಿಗಮ ಮಂಡಳಿ ಸ್ಥಾನ ಹಂಚಿಕೊಳ್ಳುವ ಬಗ್ಗೆ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​ಜತೆ ಜಿ. ಪರಮೇಶ್ವರ್​ಹಾಗೂ ಸಿದ್ದರಾಮಯ್ಯ ಅವರು ಚರ್ಚಿಸಿದರು.
ಜೆಡಿಎಸ್‌ ಖಾತೆಗಳ ವ್ಯಾಪ್ತಿಗೆ ಬರುವ ನಿಗಮ ಮಂಡಳಿ ಜೆಡಿಎಸ್‌ಗೆ ಹಾಗೂ ಕಾಂಗ್ರೆಸ್‌ ಖಾತೆಗಳ ವ್ಯಾಪ್ತಿಗೆ ಬರುವ ನಿಗಮ ಮಂಡಳಿ ಕಾಂಗ್ರೆಸ್‌ಗೆ ಹಂಚಿಕೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

Related Stories

No stories found.

Advertisement

X
Kannada Prabha
www.kannadaprabha.com