ಸರ್ಕಾರ ನೀಡಿದ ವಸತಿ ಬೇಡ, ಮನೆಯಿಂದಲೇ ಕೆಲಸ ಮಾಡುವೆ ಎಂದ ಬಿ.ಎಸ್. ಯಡಿಯೂರಪ್ಪ

ತಮ್ಮ ಪಾಲಿನ ಅದೃಷ್ಟದ ನಿವಾಸ ನೀಡುವ ಬದಲು ರಾಜ್ಯ ಸರ್ಕಾರವು ಬೇರೆ ನಿವಾಸ ನೀಡಿರುವುದಕ್ಕೆ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದು, ಹಂಚಿಕೆ ಮಾಡಿರುವ ಸರ್ಕಾರಿ ವಸತಿಯನ್ನು ತಿರಸ್ಕರಿಸಿದ್ದಾರೆ...
ಸರ್ಕಾರ ಹಂಚಿಕೆ ಮಾಡಿದ ವಸತಿ ಬೇಡ ಎಂದ ಬಿ.ಎಸ್.ಯಡಿಯೂರಪ್ಪ
ಸರ್ಕಾರ ಹಂಚಿಕೆ ಮಾಡಿದ ವಸತಿ ಬೇಡ ಎಂದ ಬಿ.ಎಸ್.ಯಡಿಯೂರಪ್ಪ
Updated on
ಬೆಂಗಳೂರು: ತಮ್ಮ ಪಾಲಿನ ಅದೃಷ್ಟದ ನಿವಾಸ ನೀಡುವ ಬದಲು ರಾಜ್ಯ ಸರ್ಕಾರವು ಬೇರೆ ನಿವಾಸ ನೀಡಿರುವುದಕ್ಕೆ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದು, ಹಂಚಿಕೆ ಮಾಡಿರುವ ಸರ್ಕಾರಿ ವಸತಿಯನ್ನು ತಿರಸ್ಕರಿಸಿದ್ದಾರೆ, 
ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಯಡಿಯೂರಪ್ಪ ಅವರು ರೇಸ್ ವ್ಯೂ ಕಾಟೇಜ್ ನಂ.2 ನಿವಾಸದಲ್ಲಿ ತಂಗಿದ್ದರು. ಇದು ಅವರ ಅದೃಷ್ಟದ ಮನೆ ಎಂದೇ ಭಾವಿಸಲಾಗಿತ್ತು. ಹೀಗಾಗಿ ಮತ್ತೊಮ್ಮೆ ಅದೇ ನಿವಾಸ ನೀಡುವಂತೆ ಕೋರಿ ಯಡಿಯೂರಪ್ಪ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಆದರೆ, ಯಡಿಯೂರಪ್ಪ ಮನವಿಯನ್ನು ತಿರಸ್ಕರಿಸಿದ ರಾಜ್ಯ ಸರ್ಕಾರವು ರೇಸ್ ವ್ಯೂ ಕಾಟೇಜ್ ನಂ.4 ನಿವಾಸವನ್ನು ಹಂಚಿಕೆ ಮಾಡಿದೆ. 
ಯಡಿಯೂರಪ್ಪ ಅವರು ಬಯಸಿದ್ದ ರೇಸ್ ವ್ಯೂ ಕಾಟೇಜ್ ನಂ.2 ಸಂಖ್ಯೆಯ ನಿವಾಸವನ್ನು ಸಚಿವ ಸಾ.ರಾ.ಮಹೇಳ್ ಅವರಿಗೆ ನೀಡಲಾಗಿದೆ. 
ಸರ್ಕಾರದ ಈ ನಡೆಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಯಡಿಯೂರಪ್ಪರ ಅವರು, ಸರ್ಕಾರಿ ನಿವಾಸಕ್ಕೆ ತೆರಳದೆ ಸ್ವಂತ ಮನೆಯಲ್ಲಿಯೇ ಇರಲು ನಿರ್ಧರಿಸಿದ್ದಾರೆ. 
ನನಗೆ ನೀಡಿರುವ ರೇಸ್ ವ್ಯೂ ಕಾಟೇಜ್ ನಂ.4 ನಿವಾಸವನ್ನು ತಿರಸ್ಕರಿಸಿದ್ದೇನೆ. ಮುಖ್ಯಮಂತ್ರಿಗಳಿಗೆ ಪತ್ರ ಬರೆದು ರೇಸ್ ವ್ಯೂ ಕಾಟೇಜ್ ನಂ.,2 ನಿವಾಸ ನೀಡುವಂತೆ ಮನವಿ ಮಾಡಿದ್ದೆ. ಆದರೆ, ಅವರು ನನ್ನ ಕೋರಿಕೆಯನ್ನು ಮನ್ನಿಸದ ಕಾರಣ ಅವರ ನಿರ್ಧಾರವನ್ನು ತಿರಸ್ಕರಿಸಿದ್ದೇನೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com