ಸಮನ್ವಯ ಸಮಿತಿ ಸಭೆಗೂ ಮುನ್ನ ಕುಮಾರಕೃಪಾಗೆ ದೇವೇಗೌಡ ಭೇಟಿ: ವೇಣುಗೋಪಾಲ್ ಜೊತೆ ಮಾತುಕತೆ

ಮೈತ್ರಿ ಸರ್ಕಾರದ ಮಹತ್ವದ ಸಮನ್ವಯ ಸಮಿತಿ ಸಭೆಗೂ ಮೊದಲು ಜೆಡಿಎಸ್ ರಾಷ್ಟ್ರಾಧ್ಯಾಕ್ಷ ಹೆಚ್.ಡಿ.ದೇವೇಗೌಡ ಅವರು ಕುಮಾರಕೃಪಾ ಅತಿಥಿಗೃಹಕ್ಕೆ ಭೇಟಿ ನೀಡಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ...
ದೇವೇಗೌಡ
ದೇವೇಗೌಡ
ಬೆಂಗಳೂರು: ಮೈತ್ರಿ ಸರ್ಕಾರದ ಮಹತ್ವದ ಸಮನ್ವಯ ಸಮಿತಿ ಸಭೆಗೂ ಮೊದಲು ಜೆಡಿಎಸ್ ರಾಷ್ಟ್ರಾಧ್ಯಾಕ್ಷ ಹೆಚ್.ಡಿ.ದೇವೇಗೌಡ ಅವರು ಕುಮಾರಕೃಪಾ ಅತಿಥಿಗೃಹಕ್ಕೆ ಭೇಟಿ ನೀಡಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. 
ಭಾನುವಾರ ಬೆಳಿಗ್ಗೆ ಕುಮಾರಕೃಪಾ ಅತಿಥಿಗೃಹದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಮನ್ವಯ ಸಮಿತಿ ಸಭೆ ಆರಂಭವಾಗುವುದಕ್ಕೂ ಮುನ್ನ ಆಗಮಿಸಿದ ದೇವೇಗೌಡ ಅವರು, ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. 
ಮಾತುಕತೆ ವೇಳೆ ಸಮ್ಮಿಶ್ರ ಸರ್ಕಾರ ದೀರ್ಘ ಬಾಳಿಕೆಗೆ ಕೆಲವೊಂದು ಸೂತ್ರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆಂದು ಉನ್ನತ ಮೂಲಗಳು ಮಾಹಿತಿ ನೀಡಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com