ಈ ವೇಳೆ ಮಾತನಾಡಿದ ಶರಣಪ್ಪ ನಾನೇ ಆರೋಪ ಮಾಡುತ್ತಿದ್ದೇನೆ. ಇದರಲ್ಲಿ ಯಾವುದೇ ಮುಲಾಜಿಲ್ಲ. ನನಗೆ ಮಾತನಾಡಲು ಅವಕಾಶಕೊಡಿ ಎಂದು ಹೇಳಿದರು. ನೀವು ಆಡಳಿತದಲ್ಲಿದ್ದೀರಾ, ನಿಮ್ಮ ಆರೋಪ ಗಂಭೀರವಾಗಿದೆ ಎಂದು ವೈ.ಎ.ನಾರಾಯಣಸ್ವಾಮಿ ಮತ್ತು ಪ್ರತಿ ಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಮತ್ತೊಮ್ಮೆ ಹೇಳಿದಾಗ ಸಿಟ್ಟಾದ ಮಟ್ಟೂರು ಹೌದು, ನಾನೇ ಹೇಳುತ್ತಿದ್ದೇನೆ ಎಂದು ರೇಗಿ ನೀವು ಕುಳಿತುಕೊಳ್ಳಿ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.