ಬೆಂಗಳೂರು:ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸರ್ಕಾರ ಕೈಗೊಂಡಿದ್ದ ಸಾಮಾಜಿಕ ಆರ್ಥಿಕ ಸಮೀಕ್ಷಾ ವರದಿ ಇನ್ನೂ ಬಿಡುಗಡೆಯಾಗದಿರಲು ಪಟ್ಟಭದ್ರ ಹಿತಾಸಕ್ತಿಯೇ ಪ್ರಮುಖ ಕಾರಣ ಎಂದು ವಿಧಾನಪರಿಷತ್ತಿನ ಆಡಳಿತಾರೂಢ ಪಕ್ಷದ ಕೆಲ ಸದಸ್ಯರು ಆರೋಪಿಸಿದ್ದಾರೆ.
ಈ ಮಧ್ಯೆ , ಬಜೆಟ್ ಅಧಿವೇಶನ ಮುಗಿಯುವುದರೊಳಗೆ ವರದಿ ಬಿಡುಗಡೆ ಮಾಡದಿದ್ದರೆ ಸದನದಲ್ಲಿ ಹೋರಾಟ ನಡೆಸುವುದಾಗಿ ಪ್ರತಿಪಕ್ಷ ಎಚ್ಚರಿಕೆ ನೀಡಿದೆ.
ಗಮನ ಸೆಳೆಯುವ ಸೂಚನೆಯಡಿ ಸದಸ್ಯ ಕೆ. ಪಿ. ನಂಜುಂಡಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಹಿಂದುಳಿದ ವರ್ಗಗಳ ಖಾತೆ ಸಚಿವ ಸಿ. ಪುಟ್ಟರಂಗಶೆಟ್ಟಿ, ಸರ್ವೆಯು ಮಾಹಿತಿಯನ್ನು ಸಂಗ್ರಹಿಸಿದ್ದು, ಮಾಹಿತಿ ವಿಶ್ಲೇಷಣೆ ಕಾರ್ಯ ಪ್ರಗತಿಯಲ್ಲಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗ ತನ್ನ ವರದಿ ಪೂರ್ಣಗೊಳಿಸಿದ ಬಳಿಕ ವರದಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
Advertisement