ರಾಜ್ಯ ಬಜೆಟ್ ಕುರಿತಂತೆ ಕುಮಾರಸ್ವಾಮಿಯವರಿಗೆ ಪತ್ರ ಬರೆದಿದ್ದ ಹೆಚ್.ಕೆ. ಪಾಟೀಲ್ ಅವರು, ಕಳೆದ ಬಾರಿ ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳನ್ನು ಬಿಟ್ಟರೆ ಉತ್ತರ ಕರ್ನಾಟಕಕ್ಕೆ ಹೊಸದಾಗಿ ಯಾವುದೇ ಯೋಜನೆಯನ್ನು ಬಜೆಟ್ನಲ್ಲಿ ಘೋಷಿಸಿಲ್ಲ. ಕಳೆದ ಬಾರಿಯ ಬಜೆಟ್ ಜತೆಗೆ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿವಿಧ ಯೋಜನೆಯನ್ನು ಪರಿಷ್ಕರಿಸಿ ಹೊಸ ಕಾರ್ಯಕ್ರಮ ಘೋಷಿಸಬೇಕಿತ್ತು. ಆದರೆ ಯಾವುದೇ ಕಾರ್ಯಕ್ರಮ ಘೋಷಿಸಿಲ್ಲ. ಹೀಗಾಗಿ ಬಜೆಟ್ ಕಾರ್ಯಕ್ರಮ ಜಾರಿಗೂ ಮುಂಚೆ ಕೆಲವು ಕಾರ್ಯಗಳನ್ನಾದರೂ ಸೇರ್ಪಡೆ ಮಾಡಿ, ಕೊರತೆಯನ್ನು ಸರಿಪಡಿಸಿ ಎಂದು ಒತ್ತಾಯಿಸಿದ್ದರು.