ಸಚಿವ ಡಿಕೆ ಶಿವಕುಮಾರ್ ಔತಣಕೂಟದಲ್ಲಿ ಬಿಜೆಪಿಯ ಗೂಳಿಹಟ್ಟಿ!

ರಾಜ್ಯ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಸಮ್ಮಿಶ್ರ ಸರ್ಕಾರದ ನೂತನ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಿಗೆ ಮಂಗಳವಾರ ಔತಣಕೂಟವನ್ನು ಆಯೋಜಿಸಿದ್ದು, ಈ ಔತಣಕೂಟದಲ್ಲಿ ಬಿಜೆಪಿಯ ಗೂಳಿಹಟ್ಟಿ ಶೇಖರ್ ಅವರು ಕಾಣಿಸಿಕೊಂಡಿದ್ದು ಅಚ್ಚರಿಗೆ ಕಾರಣವಾಗಿದೆ...
ಡಿ.ಕೆ.ಶಿವಕುಮಾರ್ ಮತ್ತು ಗೂಳಿಹಟ್ಟಿ ಶೇಖರ್
ಡಿ.ಕೆ.ಶಿವಕುಮಾರ್ ಮತ್ತು ಗೂಳಿಹಟ್ಟಿ ಶೇಖರ್
ಬೆಂಗಳೂರು; ರಾಜ್ಯ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಸಮ್ಮಿಶ್ರ ಸರ್ಕಾರದ ನೂತನ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಿಗೆ ಮಂಗಳವಾರ ಔತಣಕೂಟವನ್ನು ಆಯೋಜಿಸಿದ್ದು, ಈ ಔತಣಕೂಟದಲ್ಲಿ ಬಿಜೆಪಿಯ ಗೂಳಿಹಟ್ಟಿ ಶೇಖರ್ ಅವರು ಕಾಣಿಸಿಕೊಂಡಿದ್ದು ಅಚ್ಚರಿಗೆ ಕಾರಣವಾಗಿದೆ. 
ಖಾಸಗಿ ಹೋಟೆಲ್ ನಲ್ಲಿ ನಡೆದ ಈ ಭೋಜನ ಕೂಟಕ್ಕೆ ರಾತ್ರಿ 8ಕ್ಕೆ ಆಗಮಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾತ್ರಿ 11 ಗಂಟೆವರೆಗೂ ಇದ್ದರು, ಔತಣಕೂಟದಲ್ಲಿ ಪಾಲ್ಗೊಂಡಿದ್ದವರೊಂದಿಗೆ ಬೆರೆತು 3 ಗಂಟೆ ಕಾಲ ಕಾಳೆದರು. 
'
ಕುತೂಹಲಕಾರಿ ಸಂಗತಿಯೆಂದರೆ, ಹೆಚ್.ಡಿ.ರೇವಣ್ಣ ಸಹ ಔತಣಕೂಟದಲ್ಲಿ ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದರು. ಇದಕ್ಕೂ ಮೀರಿದ ಅಚ್ಚರಿ ಎಂದರೆ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ಆಯೋಜಿಸಿದ್ದ ಈ ಔತಣ ಕೂಟದಲ್ಲಿ ಬಿಜೆಪಿಯ ಗೂಳಿಹಟ್ಟಿ ಶೇಖರ್ ಅವರು ಕೂಡ ಕಾಣಿಸಿಕೊಕಂಡಿದ್ದು. 
ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಗೂಳಿಹಟ್ಟಿ ಶೇಖರ್ ಅವರು ಆಗಮಿಸಿದ್ದರು ಎಂದು ಹೇಳಲಾಗುತ್ತಿದೆ. 
ಸಮ್ಮಿಶ್ರ ಸರ್ಕಾರ ಮಿತ್ರಪಕ್ಷಗಳ ಕೂಟದಲ್ಲಿ ಪ್ರತಿಪಕ್ಷ ಬಿಜೆಪಿಯ ಏಕೈಕ ಶಾಸಕ ಪಾಲ್ಗೊಂಡಿರುವುದು ಇದೀಗ ಹಲವರ ಹುಬ್ಬೇರುವಂತೆ ಮಾಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com